Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...