Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...