Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...