Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...