Homeಫ್ಯಾಕ್ಟ್‌ಚೆಕ್FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್...

FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್ ಫೋಟೊ ಹಂಚಿಕೆ

- Advertisement -
- Advertisement -

‘ಮಿಸ್ಟರ್ ಬೀನ್’ ಹಾಸ್ಯ ನಟ ರೋವನ್ ಅಟ್ಕಿನ್‌ಸನ್ ಅವರಿಗೆ ವಯಸ್ಸಾಗಿದ್ದು, ಹಾಸಿಗೆ ಹಿಡಿದ್ದಿದ್ದಾರೆ ಎಂದು ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ಅಟ್ಕಿನ್‌ಸನ್ ಅವರ ಮಿಸ್ಟರ್ ಬೀನ್ ಪಾತ್ರದ ಫೋಟೋ ಮತ್ತು ಅವರು ಹಾಸಿಗೆ ಹಿಡಿದಿದ್ದಾರೆ ಎನ್ನಲಾದ ಫೋಟೋಗಳನ್ನು ಕೊಲಾಜ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 30 ಜನವರಿ 2020ರಂದು ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯಲ್ಲಿ ಅದೇ ರೀತಿಯ ಕೊಂಚ ವ್ಯತ್ಯಾಸದ ಫೋಟೋ ಕಂಡು ಬಂದಿದೆ. ನಾವು ಸುದ್ದಿ ಓದಿದಾಗ ಆ ಫೋಟೋ ಅಟ್ಕಿನ್‌ಸನ್ ಅವರದ್ದಲ್ಲ ಎಂದು ಗೊತ್ತಾಗಿದೆ.

ಮಿರರ್‌ನ ಸುದ್ದಿಯಲ್ಲಿ “75 ವರ್ಷ ವಯಸ್ಸಿನ ಬ್ಯಾರಿ ಬಾಲ್ಡರ್ಸ್ಟೋನ್ ಎಂಬ ವ್ಯಕ್ತಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮತ್ತು ಅವರ ಪತ್ನಿ ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅವರ ಆರೈಕೆಯ ಬಿಲ್ ಪಾವತಿಸಲು ಖರ್ಚು ಮಾಡಬೇಕಾಯಿತು” ಎಂದು ವಿವರಿಸಲಾಗಿತ್ತು.

ಮಿರರ್ ಪ್ರಕಟಿಸಿದ ಫೋಟೋ ಮತ್ತು ಅಟ್ಕಿನ್‌ಸನ್ ಅವರದ್ದು ಎಂದು ವೈರಲ್ ಆಗುತ್ತಿರುವ ಫೋಟೋವನ್ನು ನಾವು ಹೋಲಿಕೆ ಮಾಡಿ ನೋಡಿದಾಗ ಮುಖವೊಂದು ಬಿಟ್ಟು ಉಳಿದ ಎಲ್ಲದರಲ್ಲೂ ಸಾಮ್ಯತೆ ಕಂಡು ಬಂದಿದೆ. ಹಾಗಾಗಿ, ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋವನ್ನು ತಿರುಚಿ ಅಟ್ಕಿನ್‌ಸನ್ ಅವರದ್ದು ಎಂದು ಹಂಚಿಕೊಳ್ಳಲಾಗ್ತಿದೆ ಎಂಬುವುದು ನಮಗೆ ಗೊತ್ತಾಗಿದೆ.

ವೈರಲ್ ಫೋಟೋ ಬ್ಯಾರಿ ಬಾಲ್ಡರ್ಸ್ಟೋನ್ ಅವರದ್ದು ಎಂದು ಮತ್ತೊಂದು ವರದಿಯ ಮೂಲಕ ನಮಗೆ ಖಚಿತವಾಗಿದೆ. ಫೆಬ್ರವರಿ 5,2020ರಂದು ‘ಮ್ಯಾಂಚೆಸ್ಟರ್ ಈವಿನಿಂಗ್ ನ್ಯೂಸ್‘ ಎಂಬ ಮತ್ತೊಂದು ವೆಬ್‌ಸೈಟ್ ಕೂಡ ಅದೇ ಫೋಟೋ ಬಳಸಿಕೊಂಡು ಸುದ್ದಿ ಪ್ರಕಟಿಸಿತ್ತು.

ಕೃತಕ ಬುದ್ದಿಮತ್ತೆ (ಆರ್ಟಿಪಿಶಿಯಲ್ ಇಂಟಲಿಜೆನ್ಸ್ ) ಆಧರಿತ ಫೇಸ್ ಸ್ಟಾಂಪಿಗ್ ಸಾಧನ ಬಳಸಿ ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋಗೆ ಅಟ್ಕಿನ್‌ಸನ್ ಮುಖ ಅಂಟಿಸಿರುವುದನ್ನು ಖಚಿತಪಡಿಸಲು ನಾವು ಅದನ್ನು ಪ್ರಯತ್ನಿ ನೋಡಿದ್ದೇವೆ. ಈ ವೇಳೆ ನಮಗೆ ಸರಿಯಾದ ಫಲಿತಾಂಶ ಕಂಡು ಬಂದಿದೆ.

ಮಿಸ್ಟರ್ ಬೀನ್ ನಟ ಅಟ್ಕಿನ್‌ಸನ್ ಜುಲೈ 7,2024 ರಂದು ಫಾರ್ಮುಲಾ ಒನ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅವರ ಅನೇಕ ಫೋಟೋಗಳು ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಯಬಹುದು.

ಒಟ್ಟಿನಲ್ಲಿ, ಮಿಸ್ಟರ್ ಬೀನ್ ನಟ ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾದ ವೈರಲ್ ಫೋಟೋವನ್ನು ಡಿಜಿಟಲ್ ಆಗಿ ತಿರುಚಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಟ್ರಾಯ್ ಉಚಿತ ರೀಚಾರ್ಜ್ ಆಫರ್ ನೀಡಿದೆ ಎಂಬ ವೈರಲ್ ಸಂದೇಶ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...