Homeಫ್ಯಾಕ್ಟ್‌ಚೆಕ್FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್...

FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್ ಫೋಟೊ ಹಂಚಿಕೆ

- Advertisement -
- Advertisement -

‘ಮಿಸ್ಟರ್ ಬೀನ್’ ಹಾಸ್ಯ ನಟ ರೋವನ್ ಅಟ್ಕಿನ್‌ಸನ್ ಅವರಿಗೆ ವಯಸ್ಸಾಗಿದ್ದು, ಹಾಸಿಗೆ ಹಿಡಿದ್ದಿದ್ದಾರೆ ಎಂದು ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ಅಟ್ಕಿನ್‌ಸನ್ ಅವರ ಮಿಸ್ಟರ್ ಬೀನ್ ಪಾತ್ರದ ಫೋಟೋ ಮತ್ತು ಅವರು ಹಾಸಿಗೆ ಹಿಡಿದಿದ್ದಾರೆ ಎನ್ನಲಾದ ಫೋಟೋಗಳನ್ನು ಕೊಲಾಜ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 30 ಜನವರಿ 2020ರಂದು ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯಲ್ಲಿ ಅದೇ ರೀತಿಯ ಕೊಂಚ ವ್ಯತ್ಯಾಸದ ಫೋಟೋ ಕಂಡು ಬಂದಿದೆ. ನಾವು ಸುದ್ದಿ ಓದಿದಾಗ ಆ ಫೋಟೋ ಅಟ್ಕಿನ್‌ಸನ್ ಅವರದ್ದಲ್ಲ ಎಂದು ಗೊತ್ತಾಗಿದೆ.

ಮಿರರ್‌ನ ಸುದ್ದಿಯಲ್ಲಿ “75 ವರ್ಷ ವಯಸ್ಸಿನ ಬ್ಯಾರಿ ಬಾಲ್ಡರ್ಸ್ಟೋನ್ ಎಂಬ ವ್ಯಕ್ತಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮತ್ತು ಅವರ ಪತ್ನಿ ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅವರ ಆರೈಕೆಯ ಬಿಲ್ ಪಾವತಿಸಲು ಖರ್ಚು ಮಾಡಬೇಕಾಯಿತು” ಎಂದು ವಿವರಿಸಲಾಗಿತ್ತು.

ಮಿರರ್ ಪ್ರಕಟಿಸಿದ ಫೋಟೋ ಮತ್ತು ಅಟ್ಕಿನ್‌ಸನ್ ಅವರದ್ದು ಎಂದು ವೈರಲ್ ಆಗುತ್ತಿರುವ ಫೋಟೋವನ್ನು ನಾವು ಹೋಲಿಕೆ ಮಾಡಿ ನೋಡಿದಾಗ ಮುಖವೊಂದು ಬಿಟ್ಟು ಉಳಿದ ಎಲ್ಲದರಲ್ಲೂ ಸಾಮ್ಯತೆ ಕಂಡು ಬಂದಿದೆ. ಹಾಗಾಗಿ, ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋವನ್ನು ತಿರುಚಿ ಅಟ್ಕಿನ್‌ಸನ್ ಅವರದ್ದು ಎಂದು ಹಂಚಿಕೊಳ್ಳಲಾಗ್ತಿದೆ ಎಂಬುವುದು ನಮಗೆ ಗೊತ್ತಾಗಿದೆ.

ವೈರಲ್ ಫೋಟೋ ಬ್ಯಾರಿ ಬಾಲ್ಡರ್ಸ್ಟೋನ್ ಅವರದ್ದು ಎಂದು ಮತ್ತೊಂದು ವರದಿಯ ಮೂಲಕ ನಮಗೆ ಖಚಿತವಾಗಿದೆ. ಫೆಬ್ರವರಿ 5,2020ರಂದು ‘ಮ್ಯಾಂಚೆಸ್ಟರ್ ಈವಿನಿಂಗ್ ನ್ಯೂಸ್‘ ಎಂಬ ಮತ್ತೊಂದು ವೆಬ್‌ಸೈಟ್ ಕೂಡ ಅದೇ ಫೋಟೋ ಬಳಸಿಕೊಂಡು ಸುದ್ದಿ ಪ್ರಕಟಿಸಿತ್ತು.

ಕೃತಕ ಬುದ್ದಿಮತ್ತೆ (ಆರ್ಟಿಪಿಶಿಯಲ್ ಇಂಟಲಿಜೆನ್ಸ್ ) ಆಧರಿತ ಫೇಸ್ ಸ್ಟಾಂಪಿಗ್ ಸಾಧನ ಬಳಸಿ ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋಗೆ ಅಟ್ಕಿನ್‌ಸನ್ ಮುಖ ಅಂಟಿಸಿರುವುದನ್ನು ಖಚಿತಪಡಿಸಲು ನಾವು ಅದನ್ನು ಪ್ರಯತ್ನಿ ನೋಡಿದ್ದೇವೆ. ಈ ವೇಳೆ ನಮಗೆ ಸರಿಯಾದ ಫಲಿತಾಂಶ ಕಂಡು ಬಂದಿದೆ.

ಮಿಸ್ಟರ್ ಬೀನ್ ನಟ ಅಟ್ಕಿನ್‌ಸನ್ ಜುಲೈ 7,2024 ರಂದು ಫಾರ್ಮುಲಾ ಒನ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅವರ ಅನೇಕ ಫೋಟೋಗಳು ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಯಬಹುದು.

ಒಟ್ಟಿನಲ್ಲಿ, ಮಿಸ್ಟರ್ ಬೀನ್ ನಟ ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾದ ವೈರಲ್ ಫೋಟೋವನ್ನು ಡಿಜಿಟಲ್ ಆಗಿ ತಿರುಚಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಟ್ರಾಯ್ ಉಚಿತ ರೀಚಾರ್ಜ್ ಆಫರ್ ನೀಡಿದೆ ಎಂಬ ವೈರಲ್ ಸಂದೇಶ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...