Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...