Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...