Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...