Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...