Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ದ ಜನರು ದಂಗೆಯೆದ್ದ ಕಾರಣ, ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರಸ್ತುತ ಅಲ್ಲಿ ನೋಬೆಲ್ ಪುರಸ್ಕತ ಮೊಹಮ್ಮದ್ ಯೂನುಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ಮುನ್ನಡೆಸುತ್ತಿದೆ.

ಈ ನಡುವೆ ಬಾಂಗ್ಲಾದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಬಹುಸಂಖ್ಯಾತ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಬಹುತೇಕ ಫೋಟೋ, ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದು, ಜನರಿಗೆ ನಿಜಾಂಶ ಏನು ಎಂಬುವುದನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದೀಗ ಹೊಸದಾಗಿ ಕಳೆದ ಎರಡು ದಿನಗಳಿಂದ “ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಪ್ರತಿಪಾದಿಸಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಝೀ ನ್ಯೂಸ್ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ನ್ಯೂಸ್‌ 24 ಹಿಂದಿ‘ ಸೇರಿದಂತೆ ಕೆಲ ಮಾಧ್ಯಮಗಳು ತಮ್ಮ ವರದಿಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿವೆ. ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ “ವೈರಲ್ ವಿಡಿಯೋದಲ್ಲಿರುವುದು ಹಿಂದೂ ದೇವಸ್ಥಾನವಲ್ಲ, ಅದು ಬಾಂಗ್ಲಾದೇಶದ ಸತಿಖ್ರಾ ಎಂಬ ಪ್ರದೇಶದ ಒಂದು ರೆಸ್ಟೋರೆಂಟ್‌” ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ ರಹಮಾನ್ ಆಗಸ್ಟ್ 6,2024ರಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಕಟ್ಟಡ ಸಂಬಂಧಿತ ಎರಡು ಸ್ಕ್ರೀನ್‌ ಶಾಟ್‌ಗಳಿವೆ. ಸ್ಕ್ರೀನ್ ಶಾಟ್‌ನಲ್ಲಿ ‘রাজ প্রাসাদ কফি শপ এন্ড রেস্টুরেন্ট কলারোয়া সাতক্ষীরা’(ರಾಜ್ ಪ್ರಸಾದ್ ಕಾಫಿ ಶಾಪ್ & ರೆಸ್ಟೋರೆಂಟ್ ಕಲೋರ ಸತಿಖ್ರಾ) ಎಂದು ಬರೆಯಲಾಗಿದೆ. ಇದು ದೇವಸ್ಥಾನವಲ್ಲ, ಸತಿಖ್ರಾದ ರೆಸ್ಟೋರೆಂಟ್ ಎಂದು ಸೊಹಾನುರ್ ರಹಮಾನ್ ಕೂಡ ಬರೆದುಕೊಂಡಿದ್ದಾರೆ.

ಕಲೋರಾ ಸ್ಪೀಚ್ ಎಂಬ ಫೇಸ್‌ಬುಕ್ ಪೇಜೊಂದರಲ್ಲಿ ಆಗಸ್ಟ್ 6, 2024ರಂದು ಹಾಕಿರುವ ಪೋಸ್ಟ್‌ನಲ್ಲೂ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಮತ್ತು ಮೇಲೆ ನಾವು ಹೆಸರಿಸಿದ ರೆಸ್ಟೋರೆಂಟ್‌ನ ಫೋಟೋ ಹಂಚಿಕೊಳ್ಳಲಾಗಿದ್ದು, “ವೈರಲ್ ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ ದೇವಸ್ಥಾನವಲ್ಲ” ಎಂದು ಖಚಿತಪಡಿಸಲಾಗಿದೆ.

ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವುದು ರೆಸ್ಟೋರೆಂಟ್ ಎಂದು ಹೇಳಿರುವುದರಿಂದ, ಆ ರೆಸ್ಟೋರೆಂಟ್ ಕುರಿತು ನಾವು ಗೂಗಲ್‌ ಮ್ಯಾಪ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಫೋಟೋ ಕಂಡು ಬಂದಿದೆ.

ಬಳಿಕ ನಾವು ಯೂಟ್ಯೂಬ್‌ನಲ್ಲೂ ರೆಸ್ಟೋರೆಂಟ್ ಕುರಿತು ಮಾಹಿತಿ ಹುಡುಕಿದ್ದು, ಈ ವೇಳೆ ರೆಸ್ಟೋರೆಂಟ್ ಕುರಿತು ಹಲವು ಹಲವು ವಿಡಿಯೋಗಳು ಲಭ್ಯವಾಗಿದೆ. ಅವುಗಳಲ್ಲಿ ಒಂದು ಕೆಳಗಿದೆ.

ಇನ್ನು, ಆ ರೆಸ್ಟೋರೆಂಟ್ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಯುವ ವಿಭಾಗವಾದ ಜೂಬೋ ಲೀಗ್‌ನ ನಾಯಕ ಕಾಝಿ ಅಸಾದುಜ್ಜಮಾನ್ ಶಹಜಾದಾ ಅವರ ಒಡೆತನದಲ್ಲಿದೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಹೊತ್ತಿ ಉರಿದಿದ್ದು ಹೇಗೆ?

ಆಗಸ್ಟ್ 5, 2024ರಂದು ಕಲ್ಬೇಲ  ಎಂಬ ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯ ಪ್ರಕಾರ, ಶೇಕ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ ನಂತರ ಹಲವಾರು ಸ್ಥಳಗಳಲ್ಲಿ ಜನರು ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸುವುದರಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಈ ರೆಸ್ಟೋರೆಂಟ್‌ಗೂ ಬೆಂಕಿ ಹಚ್ಚಿದ್ದಾರೆ.

ರೆಸ್ಟೋರೆಂಟ್ ಮಾಲೀಕ ಶೇಖ್ ಹಸೀನಾ ಪಕ್ಷದವರಾಗಿರುವುದರಿಂದ ರಾಜಕೀಯ ದ್ವೇಷಕ್ಕೆ ಬೆಂಕಿ ಹಚ್ಚಿರಬಹುದು ಎಂದು ನಾವು ಊಹಿಸಿದ್ದೇವೆ. ಏಕೆಂದರೆ, ಹಸೀನಾ ಅವರ ಪಕ್ಷದ ನಾಯಕರ ಆಸ್ತಿಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...