Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ದ ಜನರು ದಂಗೆಯೆದ್ದ ಕಾರಣ, ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರಸ್ತುತ ಅಲ್ಲಿ ನೋಬೆಲ್ ಪುರಸ್ಕತ ಮೊಹಮ್ಮದ್ ಯೂನುಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ಮುನ್ನಡೆಸುತ್ತಿದೆ.

ಈ ನಡುವೆ ಬಾಂಗ್ಲಾದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಬಹುಸಂಖ್ಯಾತ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಬಹುತೇಕ ಫೋಟೋ, ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದು, ಜನರಿಗೆ ನಿಜಾಂಶ ಏನು ಎಂಬುವುದನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದೀಗ ಹೊಸದಾಗಿ ಕಳೆದ ಎರಡು ದಿನಗಳಿಂದ “ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಪ್ರತಿಪಾದಿಸಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಝೀ ನ್ಯೂಸ್ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ನ್ಯೂಸ್‌ 24 ಹಿಂದಿ‘ ಸೇರಿದಂತೆ ಕೆಲ ಮಾಧ್ಯಮಗಳು ತಮ್ಮ ವರದಿಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿವೆ. ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ “ವೈರಲ್ ವಿಡಿಯೋದಲ್ಲಿರುವುದು ಹಿಂದೂ ದೇವಸ್ಥಾನವಲ್ಲ, ಅದು ಬಾಂಗ್ಲಾದೇಶದ ಸತಿಖ್ರಾ ಎಂಬ ಪ್ರದೇಶದ ಒಂದು ರೆಸ್ಟೋರೆಂಟ್‌” ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ ರಹಮಾನ್ ಆಗಸ್ಟ್ 6,2024ರಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಕಟ್ಟಡ ಸಂಬಂಧಿತ ಎರಡು ಸ್ಕ್ರೀನ್‌ ಶಾಟ್‌ಗಳಿವೆ. ಸ್ಕ್ರೀನ್ ಶಾಟ್‌ನಲ್ಲಿ ‘রাজ প্রাসাদ কফি শপ এন্ড রেস্টুরেন্ট কলারোয়া সাতক্ষীরা’(ರಾಜ್ ಪ್ರಸಾದ್ ಕಾಫಿ ಶಾಪ್ & ರೆಸ್ಟೋರೆಂಟ್ ಕಲೋರ ಸತಿಖ್ರಾ) ಎಂದು ಬರೆಯಲಾಗಿದೆ. ಇದು ದೇವಸ್ಥಾನವಲ್ಲ, ಸತಿಖ್ರಾದ ರೆಸ್ಟೋರೆಂಟ್ ಎಂದು ಸೊಹಾನುರ್ ರಹಮಾನ್ ಕೂಡ ಬರೆದುಕೊಂಡಿದ್ದಾರೆ.

ಕಲೋರಾ ಸ್ಪೀಚ್ ಎಂಬ ಫೇಸ್‌ಬುಕ್ ಪೇಜೊಂದರಲ್ಲಿ ಆಗಸ್ಟ್ 6, 2024ರಂದು ಹಾಕಿರುವ ಪೋಸ್ಟ್‌ನಲ್ಲೂ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಮತ್ತು ಮೇಲೆ ನಾವು ಹೆಸರಿಸಿದ ರೆಸ್ಟೋರೆಂಟ್‌ನ ಫೋಟೋ ಹಂಚಿಕೊಳ್ಳಲಾಗಿದ್ದು, “ವೈರಲ್ ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ ದೇವಸ್ಥಾನವಲ್ಲ” ಎಂದು ಖಚಿತಪಡಿಸಲಾಗಿದೆ.

ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವುದು ರೆಸ್ಟೋರೆಂಟ್ ಎಂದು ಹೇಳಿರುವುದರಿಂದ, ಆ ರೆಸ್ಟೋರೆಂಟ್ ಕುರಿತು ನಾವು ಗೂಗಲ್‌ ಮ್ಯಾಪ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಫೋಟೋ ಕಂಡು ಬಂದಿದೆ.

ಬಳಿಕ ನಾವು ಯೂಟ್ಯೂಬ್‌ನಲ್ಲೂ ರೆಸ್ಟೋರೆಂಟ್ ಕುರಿತು ಮಾಹಿತಿ ಹುಡುಕಿದ್ದು, ಈ ವೇಳೆ ರೆಸ್ಟೋರೆಂಟ್ ಕುರಿತು ಹಲವು ಹಲವು ವಿಡಿಯೋಗಳು ಲಭ್ಯವಾಗಿದೆ. ಅವುಗಳಲ್ಲಿ ಒಂದು ಕೆಳಗಿದೆ.

ಇನ್ನು, ಆ ರೆಸ್ಟೋರೆಂಟ್ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಯುವ ವಿಭಾಗವಾದ ಜೂಬೋ ಲೀಗ್‌ನ ನಾಯಕ ಕಾಝಿ ಅಸಾದುಜ್ಜಮಾನ್ ಶಹಜಾದಾ ಅವರ ಒಡೆತನದಲ್ಲಿದೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಹೊತ್ತಿ ಉರಿದಿದ್ದು ಹೇಗೆ?

ಆಗಸ್ಟ್ 5, 2024ರಂದು ಕಲ್ಬೇಲ  ಎಂಬ ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯ ಪ್ರಕಾರ, ಶೇಕ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ ನಂತರ ಹಲವಾರು ಸ್ಥಳಗಳಲ್ಲಿ ಜನರು ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸುವುದರಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಈ ರೆಸ್ಟೋರೆಂಟ್‌ಗೂ ಬೆಂಕಿ ಹಚ್ಚಿದ್ದಾರೆ.

ರೆಸ್ಟೋರೆಂಟ್ ಮಾಲೀಕ ಶೇಖ್ ಹಸೀನಾ ಪಕ್ಷದವರಾಗಿರುವುದರಿಂದ ರಾಜಕೀಯ ದ್ವೇಷಕ್ಕೆ ಬೆಂಕಿ ಹಚ್ಚಿರಬಹುದು ಎಂದು ನಾವು ಊಹಿಸಿದ್ದೇವೆ. ಏಕೆಂದರೆ, ಹಸೀನಾ ಅವರ ಪಕ್ಷದ ನಾಯಕರ ಆಸ್ತಿಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...