Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ದ ಜನರು ದಂಗೆಯೆದ್ದ ಕಾರಣ, ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರಸ್ತುತ ಅಲ್ಲಿ ನೋಬೆಲ್ ಪುರಸ್ಕತ ಮೊಹಮ್ಮದ್ ಯೂನುಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ಮುನ್ನಡೆಸುತ್ತಿದೆ.

ಈ ನಡುವೆ ಬಾಂಗ್ಲಾದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಬಹುಸಂಖ್ಯಾತ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಬಹುತೇಕ ಫೋಟೋ, ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದು, ಜನರಿಗೆ ನಿಜಾಂಶ ಏನು ಎಂಬುವುದನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದೀಗ ಹೊಸದಾಗಿ ಕಳೆದ ಎರಡು ದಿನಗಳಿಂದ “ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಪ್ರತಿಪಾದಿಸಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಝೀ ನ್ಯೂಸ್ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ನ್ಯೂಸ್‌ 24 ಹಿಂದಿ‘ ಸೇರಿದಂತೆ ಕೆಲ ಮಾಧ್ಯಮಗಳು ತಮ್ಮ ವರದಿಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿವೆ. ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ “ವೈರಲ್ ವಿಡಿಯೋದಲ್ಲಿರುವುದು ಹಿಂದೂ ದೇವಸ್ಥಾನವಲ್ಲ, ಅದು ಬಾಂಗ್ಲಾದೇಶದ ಸತಿಖ್ರಾ ಎಂಬ ಪ್ರದೇಶದ ಒಂದು ರೆಸ್ಟೋರೆಂಟ್‌” ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ ರಹಮಾನ್ ಆಗಸ್ಟ್ 6,2024ರಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಕಟ್ಟಡ ಸಂಬಂಧಿತ ಎರಡು ಸ್ಕ್ರೀನ್‌ ಶಾಟ್‌ಗಳಿವೆ. ಸ್ಕ್ರೀನ್ ಶಾಟ್‌ನಲ್ಲಿ ‘রাজ প্রাসাদ কফি শপ এন্ড রেস্টুরেন্ট কলারোয়া সাতক্ষীরা’(ರಾಜ್ ಪ್ರಸಾದ್ ಕಾಫಿ ಶಾಪ್ & ರೆಸ್ಟೋರೆಂಟ್ ಕಲೋರ ಸತಿಖ್ರಾ) ಎಂದು ಬರೆಯಲಾಗಿದೆ. ಇದು ದೇವಸ್ಥಾನವಲ್ಲ, ಸತಿಖ್ರಾದ ರೆಸ್ಟೋರೆಂಟ್ ಎಂದು ಸೊಹಾನುರ್ ರಹಮಾನ್ ಕೂಡ ಬರೆದುಕೊಂಡಿದ್ದಾರೆ.

ಕಲೋರಾ ಸ್ಪೀಚ್ ಎಂಬ ಫೇಸ್‌ಬುಕ್ ಪೇಜೊಂದರಲ್ಲಿ ಆಗಸ್ಟ್ 6, 2024ರಂದು ಹಾಕಿರುವ ಪೋಸ್ಟ್‌ನಲ್ಲೂ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಮತ್ತು ಮೇಲೆ ನಾವು ಹೆಸರಿಸಿದ ರೆಸ್ಟೋರೆಂಟ್‌ನ ಫೋಟೋ ಹಂಚಿಕೊಳ್ಳಲಾಗಿದ್ದು, “ವೈರಲ್ ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ ದೇವಸ್ಥಾನವಲ್ಲ” ಎಂದು ಖಚಿತಪಡಿಸಲಾಗಿದೆ.

ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವುದು ರೆಸ್ಟೋರೆಂಟ್ ಎಂದು ಹೇಳಿರುವುದರಿಂದ, ಆ ರೆಸ್ಟೋರೆಂಟ್ ಕುರಿತು ನಾವು ಗೂಗಲ್‌ ಮ್ಯಾಪ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಫೋಟೋ ಕಂಡು ಬಂದಿದೆ.

ಬಳಿಕ ನಾವು ಯೂಟ್ಯೂಬ್‌ನಲ್ಲೂ ರೆಸ್ಟೋರೆಂಟ್ ಕುರಿತು ಮಾಹಿತಿ ಹುಡುಕಿದ್ದು, ಈ ವೇಳೆ ರೆಸ್ಟೋರೆಂಟ್ ಕುರಿತು ಹಲವು ಹಲವು ವಿಡಿಯೋಗಳು ಲಭ್ಯವಾಗಿದೆ. ಅವುಗಳಲ್ಲಿ ಒಂದು ಕೆಳಗಿದೆ.

ಇನ್ನು, ಆ ರೆಸ್ಟೋರೆಂಟ್ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಯುವ ವಿಭಾಗವಾದ ಜೂಬೋ ಲೀಗ್‌ನ ನಾಯಕ ಕಾಝಿ ಅಸಾದುಜ್ಜಮಾನ್ ಶಹಜಾದಾ ಅವರ ಒಡೆತನದಲ್ಲಿದೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಹೊತ್ತಿ ಉರಿದಿದ್ದು ಹೇಗೆ?

ಆಗಸ್ಟ್ 5, 2024ರಂದು ಕಲ್ಬೇಲ  ಎಂಬ ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯ ಪ್ರಕಾರ, ಶೇಕ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ ನಂತರ ಹಲವಾರು ಸ್ಥಳಗಳಲ್ಲಿ ಜನರು ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸುವುದರಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಈ ರೆಸ್ಟೋರೆಂಟ್‌ಗೂ ಬೆಂಕಿ ಹಚ್ಚಿದ್ದಾರೆ.

ರೆಸ್ಟೋರೆಂಟ್ ಮಾಲೀಕ ಶೇಖ್ ಹಸೀನಾ ಪಕ್ಷದವರಾಗಿರುವುದರಿಂದ ರಾಜಕೀಯ ದ್ವೇಷಕ್ಕೆ ಬೆಂಕಿ ಹಚ್ಚಿರಬಹುದು ಎಂದು ನಾವು ಊಹಿಸಿದ್ದೇವೆ. ಏಕೆಂದರೆ, ಹಸೀನಾ ಅವರ ಪಕ್ಷದ ನಾಯಕರ ಆಸ್ತಿಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...