Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ದ ಜನರು ದಂಗೆಯೆದ್ದ ಕಾರಣ, ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರಸ್ತುತ ಅಲ್ಲಿ ನೋಬೆಲ್ ಪುರಸ್ಕತ ಮೊಹಮ್ಮದ್ ಯೂನುಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ಮುನ್ನಡೆಸುತ್ತಿದೆ.

ಈ ನಡುವೆ ಬಾಂಗ್ಲಾದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಬಹುಸಂಖ್ಯಾತ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಬಹುತೇಕ ಫೋಟೋ, ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದು, ಜನರಿಗೆ ನಿಜಾಂಶ ಏನು ಎಂಬುವುದನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದೀಗ ಹೊಸದಾಗಿ ಕಳೆದ ಎರಡು ದಿನಗಳಿಂದ “ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಪ್ರತಿಪಾದಿಸಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಝೀ ನ್ಯೂಸ್ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ನ್ಯೂಸ್‌ 24 ಹಿಂದಿ‘ ಸೇರಿದಂತೆ ಕೆಲ ಮಾಧ್ಯಮಗಳು ತಮ್ಮ ವರದಿಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿವೆ. ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ “ವೈರಲ್ ವಿಡಿಯೋದಲ್ಲಿರುವುದು ಹಿಂದೂ ದೇವಸ್ಥಾನವಲ್ಲ, ಅದು ಬಾಂಗ್ಲಾದೇಶದ ಸತಿಖ್ರಾ ಎಂಬ ಪ್ರದೇಶದ ಒಂದು ರೆಸ್ಟೋರೆಂಟ್‌” ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ ರಹಮಾನ್ ಆಗಸ್ಟ್ 6,2024ರಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಕಟ್ಟಡ ಸಂಬಂಧಿತ ಎರಡು ಸ್ಕ್ರೀನ್‌ ಶಾಟ್‌ಗಳಿವೆ. ಸ್ಕ್ರೀನ್ ಶಾಟ್‌ನಲ್ಲಿ ‘রাজ প্রাসাদ কফি শপ এন্ড রেস্টুরেন্ট কলারোয়া সাতক্ষীরা’(ರಾಜ್ ಪ್ರಸಾದ್ ಕಾಫಿ ಶಾಪ್ & ರೆಸ್ಟೋರೆಂಟ್ ಕಲೋರ ಸತಿಖ್ರಾ) ಎಂದು ಬರೆಯಲಾಗಿದೆ. ಇದು ದೇವಸ್ಥಾನವಲ್ಲ, ಸತಿಖ್ರಾದ ರೆಸ್ಟೋರೆಂಟ್ ಎಂದು ಸೊಹಾನುರ್ ರಹಮಾನ್ ಕೂಡ ಬರೆದುಕೊಂಡಿದ್ದಾರೆ.

ಕಲೋರಾ ಸ್ಪೀಚ್ ಎಂಬ ಫೇಸ್‌ಬುಕ್ ಪೇಜೊಂದರಲ್ಲಿ ಆಗಸ್ಟ್ 6, 2024ರಂದು ಹಾಕಿರುವ ಪೋಸ್ಟ್‌ನಲ್ಲೂ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಮತ್ತು ಮೇಲೆ ನಾವು ಹೆಸರಿಸಿದ ರೆಸ್ಟೋರೆಂಟ್‌ನ ಫೋಟೋ ಹಂಚಿಕೊಳ್ಳಲಾಗಿದ್ದು, “ವೈರಲ್ ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ ದೇವಸ್ಥಾನವಲ್ಲ” ಎಂದು ಖಚಿತಪಡಿಸಲಾಗಿದೆ.

ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವುದು ರೆಸ್ಟೋರೆಂಟ್ ಎಂದು ಹೇಳಿರುವುದರಿಂದ, ಆ ರೆಸ್ಟೋರೆಂಟ್ ಕುರಿತು ನಾವು ಗೂಗಲ್‌ ಮ್ಯಾಪ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಫೋಟೋ ಕಂಡು ಬಂದಿದೆ.

ಬಳಿಕ ನಾವು ಯೂಟ್ಯೂಬ್‌ನಲ್ಲೂ ರೆಸ್ಟೋರೆಂಟ್ ಕುರಿತು ಮಾಹಿತಿ ಹುಡುಕಿದ್ದು, ಈ ವೇಳೆ ರೆಸ್ಟೋರೆಂಟ್ ಕುರಿತು ಹಲವು ಹಲವು ವಿಡಿಯೋಗಳು ಲಭ್ಯವಾಗಿದೆ. ಅವುಗಳಲ್ಲಿ ಒಂದು ಕೆಳಗಿದೆ.

ಇನ್ನು, ಆ ರೆಸ್ಟೋರೆಂಟ್ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಯುವ ವಿಭಾಗವಾದ ಜೂಬೋ ಲೀಗ್‌ನ ನಾಯಕ ಕಾಝಿ ಅಸಾದುಜ್ಜಮಾನ್ ಶಹಜಾದಾ ಅವರ ಒಡೆತನದಲ್ಲಿದೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಹೊತ್ತಿ ಉರಿದಿದ್ದು ಹೇಗೆ?

ಆಗಸ್ಟ್ 5, 2024ರಂದು ಕಲ್ಬೇಲ  ಎಂಬ ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯ ಪ್ರಕಾರ, ಶೇಕ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ ನಂತರ ಹಲವಾರು ಸ್ಥಳಗಳಲ್ಲಿ ಜನರು ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸುವುದರಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಈ ರೆಸ್ಟೋರೆಂಟ್‌ಗೂ ಬೆಂಕಿ ಹಚ್ಚಿದ್ದಾರೆ.

ರೆಸ್ಟೋರೆಂಟ್ ಮಾಲೀಕ ಶೇಖ್ ಹಸೀನಾ ಪಕ್ಷದವರಾಗಿರುವುದರಿಂದ ರಾಜಕೀಯ ದ್ವೇಷಕ್ಕೆ ಬೆಂಕಿ ಹಚ್ಚಿರಬಹುದು ಎಂದು ನಾವು ಊಹಿಸಿದ್ದೇವೆ. ಏಕೆಂದರೆ, ಹಸೀನಾ ಅವರ ಪಕ್ಷದ ನಾಯಕರ ಆಸ್ತಿಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...