Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...