Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...