Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...