Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...