Homeಫ್ಯಾಕ್ಟ್‌ಚೆಕ್Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು...

Fact Check : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಣೆ ಮೇಲಿನ ಕುಂಕುಮ ಅಳಿಸಿದ್ದು ನಿಜಾನಾ?

- Advertisement -
- Advertisement -

“ಕೈ ಹಿಡಿದ ಮೇಲೆ ಶಿವಣ್ಣನಿಗೆ ಕುಂಕುಮ ಕೂಡ ಹೊರೆಯಾಯ್ತು” ಎಂದು ನಟ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘Arya Pavan Kumar’ ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಟಿವಿ9 ಕನ್ನಡದ ವಾಟರ್ ಮಾರ್ಕ್‌ ಇರುವುದರಿಂದ, ಟಿವಿ9 ನ ಅಧಿಕೃತ ಯೂಟ್ಯೂಬ್‌ ಚಾನೆಲ್‌ನಲ್ಲಿ ನಾವು ಮೂಲ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಏಪ್ರಿಲ್ 9, 2024ರಂದು “Geetha Shivarajkumar:ಫೋಟೋಗಾಗಿ ವೇದಿಕೆಗೆ ಬಂದ ಮಕ್ಕಳ ಜೊತೆ ಶಿವಣ್ಣ ಏನ್ ಮಾಡಿದ್ರು ನೋಡಿ?” ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ 2 ನಿಮಿಷ 53 ಸೆಕೆಂಡ್‌ನ ವಿಡಿಯೋದಲ್ಲಿ 0:34 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ದೃಶ್ಯವಿದೆ.

ವಿಡಿಯೋದಲ್ಲಿ ಕಾಣುವಂತೆ ಶಿವರಾಜ್‌ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಅವರು ಹಣೆ ಮೇಲಿನ ಬೆವರು ಒರೆಸಿದಾಗ ಕುಂಕುಮ ಸಹ ಅರ್ಧ ಅಳಿಸಿದೆ.

ಇನ್ನು ವಿಡಿಯೋದಲ್ಲಿ 42ನೇ ಸೆಕೆಂಡ್‌ನಲ್ಲಿ ಗೀತಾ ಶಿವರಾಜ್ ಕುಮಾರ್‌ ಎದುರಿಗೆ ಇದ್ದವರ ಜೊತೆ ಸನ್ನೆ ಮಾಡುತ್ತಾ ಕುಂಕುಮ ಸರಿಪಡಿಸಿಕೊಳ್ಳುವುದನ್ನು ನೋಡಬಹುದು. ಅವರ ಹಣೆಯಲ್ಲಿ ಎರಡು ಕಡೆ ಕುಂಕುಮ ಇದ್ದುದರಿಂದ ಎದುರಿಗಿದ್ದವರ ಸೂಚನೆಯ ಮೇರೆಗೆ ಸರಿಪಡಿಸಿಕೊಳ್ಳಲು ಯತ್ನಿಸಿ ಕುಂಕುಮ ಅಳಿಸಿದ್ದಾರೆ. ಆನಂತರ ಸರಿ ಹೋಯಿತಾ? ಎಂಬರ್ಥದಲ್ಲಿ ಎದುರಿಗೆ ಇದ್ದರಿಗೆ ಸನ್ನೆ ಮಾಡುವುದನ್ನು ಸಹ ವಿಡಿಯೋದ 50 ರಿಂದ 59 ಸೆಕೆಂಡ್‌ವರೆಗೂ ನೋಡಬಹುದು.

“ಶಿವಮೊಗ್ಗ: ಮತದಾರರ ನಡುವೆ ಯುಗಾದಿ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ, ಶಿವರಾಜ್​​ಕುಮಾರ್” ಎಂಬ ಶೀರ್ಷಿಕೆಯಲ್ಲಿ ‘ಈಟಿವಿ ಭಾರತ್ ಕನ್ನಡ’ ಏಪ್ರಿಲ್ 9, 2024ರಂದು ವರದಿಯೊಂದನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲಿ ‘ನವ ಸಂವತ್ಸರ ಸಂಭ್ರಮದಲ್ಲಿ ಗೀತಕ್ಕ ಶಿವಣ್ಣ ನಮ್ಮೊಂದಿಗೆ’ ಎಂಬ ಯುಗಾದಿ ಕಾರ್ಯಕ್ರಮದಲ್ಲಿ ಶಿವರಾಜ್‌ ಕುಮಾರ್ ಮತ್ತು ಗೀತಾ ಅವರು ಇಬ್ಬರೂ ಪೂಜೆ ಮಾಡುವುದು ಸೇರಿದಂತೆ ಹಲವು ಫೋಟೊ ಮತ್ತು ವಿಡಿಯೋಗಳನ್ನು ನಾವು ಕಾಣಬಹುದು. ಅದರಲ್ಲಿ ಅಭಿಮಾನಿಗಳು ಬೆಳ್ಳಿ ಕಡಗ ಹಾಕಿ ಪೂಜೆ ಮಾಡಿದ್ದಾರೆ. ಕುಂಕುಮ ಸಹ ಇಟ್ಟಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಮೇಲೆ ಉಲ್ಲೇಖಿಸಿದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ‘ಏಪ್ರಿಲ್ 9, 2024ರಂದು ನ್ಯೂಸ್ ಫಸ್ಟ್ ಕನ್ನಡ “Geetha Shivarajkumar:ಬೆಳ್ಳಿ ಕಡಗ ಹಾಕಿದ ಫ್ಯಾನ್​ಗೆ ಧನ್ಯವಾದ ಹೇಳಿದ ಗೀತಕ್ಕ..” ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಗೀತಾ ಶಿವರಾಜ್‌ ಕುಮಾರ್ ಸಂಪೂರ್ಣವಾಗಿ ಕುಂಕುಮ ಇಟ್ಟಿರುವುದನ್ನು ಕಾಣಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಶಿವರಾಜ್‌ ಕುಮಾರ್ ಮತ್ತು ಅವರ ಪತ್ನಿ ಗೀತಾ ಅವರು ಉದ್ದೇಶಪೂರ್ವಕವಾಗಿ ಹಣೆ ಮೇಲಿನ ಕುಂಕುಮ ಅಳಿಸಿದಂತೆ ಕಾಣುತ್ತಿಲ್ಲ. ಇದಕ್ಕೆ ಪುರಾವೆಯಾಗಿ ನಾವು ವಿಡಿಯೋಗಳನ್ನು ಲಗತ್ತಿಸಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಪಾದನೆ ಮಾಡಿದಂತೆ ಅಲ್ಪ ಸಂಖ್ಯಾತರನ್ನು ಓಲೈಸಲೋ ಅಥವಾ ಕಾಂಗ್ರೆಸ್ ಸೇರಿದ ಕಾರಣಕ್ಕೆ ಕುಂಕುಮ ಅಳಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ನಮಗೆ ದೊರೆತಿಲ್ಲ.

ಇದನ್ನೂ ಓದಿ : Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...