Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಹಿಂದೂ ಕುಟುಂಬದ ಮೂವರ ಹತ್ಯೆ ಎಂಬ ಸುದ್ದಿ ಮತ್ತು ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಭಾರತದ ಹಲವರ ಎಕ್ಸ್ ಖಾತೆಗಳಲ್ಲಿ ಕಳೆದ 10 ದಿನಗಳಿಂದ ಸುದ್ದಿಯನ್ನು ಹಂಚಿಕೊಂಡು ಮುಸ್ಲಿಮರ ವಿರುದ್ದ ದ್ವೇಷ ಕಾರುವ ಪ್ರಯತ್ನ ಮಾಡಲಾಗ್ತಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆರ್ಗನೈಸರ್‌ (organiser) ವೆಬ್‌ಸೈಟ್‌ನ ಎಕ್ಸ್‌ ಖಾತೆಯಲ್ಲೂ ಈ ಸುದ್ದಿಯನ್ನು ಹಂಚಿಕೊಳ್ಳಲಾಗಿದ್ದು, ಫೋಟೋ ಸಹಿತ ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬ ಮೂವರ ಮೃತದೇಹ ಶಿರಚ್ಚೇದ ಮಾಡಿದ ರೀತಿಯಲ್ಲಿ ಪತ್ತೆ. ವಿಕಾಸ್ ಸರ್ಕಾರ್ (45), ಅವರ ಪತ್ನಿ ಸ್ವರ್ಣಾ ರಾಣಿ ಸರ್ಕಾರ್ (40) ಮತ್ತು ಪುತ್ರಿ ಪರ್ಮಿತಾ ಸರ್ಕಾರ್ (15) ಮನೆಯಲ್ಲೇ ಹತ್ಯೆಯಾಗಿದ್ದಾರೆ ಎಂದು ಬರೆದಿತ್ತು.

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ಮೇಲೆ ತಿಳಿಸಿದ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಗೂಗಲ್‌ನಲ್ಲಿ ನಾವು ಈ ಕುರಿತ ಸುದ್ದಿಯನ್ನು ಹುಡುಕಾಡಿದಾಗ, ಜನವರಿ 31, 2024 ರಂದು ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್ ದಿ ಡೈಲಿ ಸ್ಟಾರ್‌ನಲ್ಲಿ ಈ ಕುರಿತು ವರದಿ ಪ್ರಕಟಗೊಂಡಿರುವುದು ಲಭ್ಯವಾಗಿದೆ. ವರದಿಯ ಪ್ರಕಾರ, ಬಾಂಗ್ಲಾದೇಶದ ಸಿರಾಜ್‌ಗಂಜ್ ಜಿಲ್ಲೆಯಲ್ಲಿ ಈ ತ್ರಿವಳಿ ಕೊಲೆ ನಡೆದಿದೆ. ಪ್ರಕರಣದ ಪ್ರಮುಖ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರಾದ ಪರಮಿತಾ ಸರ್ಕಾರ್ ತುಶಿ, ವಿಕಾಸ್ ಸರ್ಕಾರ್ ಮತ್ತು ಸ್ವರ್ಣಾ ರಾಣಿ ಸರ್ಕಾರ್ ಅವರ ಶವಗಳನ್ನು ಮನೆಯಿಂದ ವಶಪಡಿಸಿಕೊಳ್ಳಲಾಗಿದೆ.

ದಿ ಡೈಲಿ ಸ್ಟಾರ್ ವರದಿಯ ಪ್ರಕಾರ, ಬಂಧಿತ ವ್ಯಕ್ತಿ ರಾಜೀವ್ ಭೌಮಿಕ್ ವಿಕಾಸ್ ಮೃತರ ಸಂಬಂಧಿಯಾಗಿದ್ದಾನೆ. ರಾಜೀವ್ ಹಣದ ವಿಚಾರವಾಗಿ ವಿಕಾಸ್ ಮತ್ತು ಅವರ ಕುಟುಂಬಸ್ಥರನ್ನು ಕೊಲೆ ಮಾಡಿದ್ದಾನೆ. ಆರೋಪಿ ರಾಜೀವ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಸಿರಾಜ್‌ಗಂಜ್ ಪೊಲೀಸ್ ವರಿಷ್ಠಾಧಿಕಾರಿ ಅರಿಫುರ್ ರೆಹಮಾನ್ ಮಂಡಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರೋಪಿಯ ತಪ್ಪೊಪ್ಪಿಗೆ ಪ್ರಕಾರ, ಕೊಲೆಯ ಹಿಂದಿನ ಕಾರಣ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದೆ. ಆರೋಪಿ ರಾಜೀವ್ ಮೃತ ವಿಕಾಸ್ ಅವರಿಂದ 35 ಲಕ್ಷ ರೂಪಾಯಿ ಸಾಲ ಮರುಪಾವತಿಸಲು ಸಾಧ್ಯವಾಗದೆ ಕೊಲೆ ಮಾಡಿದ್ದಾನೆ.

ನಾವು ನಡೆಸಿದ ಪರಿಶೀಲನೆಯಲ್ಲಿ ಮೇಲೆ ತಿಳಿಸಿದ ಕೊಲೆ ನಡೆದಿರುವುದು ನಿಜ. ಆದರೆ, ಅದು ಹಣದ ವಿಚಾರವಾಗಿ ಸಂಬಂಧಿಕನೇ ಒಂದು ಕುಟುಂಬವನ್ನು ಹತ್ಯೆಗೈದಿರುವುದಾಗಿದೆ. ಅಲ್ಲದೆ ಮುಸ್ಲಿಮರು ಹಿಂದೂ ಕುಟುಂಬವನ್ನು ಹತ್ಯೆ ಮಾಡಿರುವುದು ಅಲ್ಲ.

ಇದನ್ನೂ ಓದಿ : Fact Check: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...