Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು...

FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತ ಬೆಂಗಳೂರು ನಗರದಲ್ಲಿ ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಲಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್‌ (ಡಿಆರ್‌ಡಿಒ)ನ ಮೂವರು ಇಂಜಿನಿಯರ್‌ಗಳು ಸಾವನಪ್ಪಿರುವ ಸಾಧ್ಯತೆಯಿದೆ. ಘಟನೆಯು ಡಿಆರ್‌ಡಿಒ ಹೆಚ್‌ಎಎಲ್ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ ಪಶ್ಚಿಮಕ್ಕೆ 4 ಕಿಮೀ ದೂರದಲ್ಲಿ ನಡೆದಿದೆ” ಎಂದು ಪಾಕಿಸ್ತಾನ್ ಫಸ್ಟ್ (@Pak1stTeam) ಹೆಸರಿನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಹಾಕಲಾಗಿದೆ. ಜೊತೆಗೆ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿಯುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ. ಪೋಸ್ಟ್‌ನಲ್ಲಿರುವ ವಿಡಿಯೋ ಇತ್ತೀಚೆಗೆ ಎಂ.ಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಬೆಂಕಿಗಾಹುತಿಯಾದ ಘಟನೆಯದ್ದಾಗಿದೆ.

ಜುಲೈ 9, 2024ರಂದು ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ ಬಳಿ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಎಚ್ಚೆತ್ತ ನಿರ್ವಾಹಕ ಬಸ್‌ನಲ್ಲಿದ್ದ ಜನರನ್ನು ಕೆಳಗಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಎಂ.ಜಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಬಸ್‌ ಹೊತ್ತಿ ಉರಿಯುವಾಗ ಭಾರೀ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು.

ಎಕ್ಸ್‌ ಪೋಸ್ಟ್‌ನಲ್ಲಿ ಡಿಆರ್‌ಡಿಒ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ 4 ಕಿಮೀ ಪಶ್ಚಿಮಕ್ಕೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅಸಲಿಗೆ ಹೆಚ್‌ಎಲ್‌ ವಿಮಾನ ಪರೀಕ್ಷಾ ಕೇಂದ್ರದಿಂದ ಎಂ.ಜಿ ರಸ್ತೆಯ ಅನಿಲ್‌ ಕುಂಬ್ಳೆ ಸರ್ಕಲ್‌ ಸುಮಾರು 9 ಕಿಮೀ ದೂರದಲ್ಲಿದೆ.

ಇದನ್ನೂ ಓದಿ : FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...