Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು...

FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತ ಬೆಂಗಳೂರು ನಗರದಲ್ಲಿ ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಲಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್‌ (ಡಿಆರ್‌ಡಿಒ)ನ ಮೂವರು ಇಂಜಿನಿಯರ್‌ಗಳು ಸಾವನಪ್ಪಿರುವ ಸಾಧ್ಯತೆಯಿದೆ. ಘಟನೆಯು ಡಿಆರ್‌ಡಿಒ ಹೆಚ್‌ಎಎಲ್ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ ಪಶ್ಚಿಮಕ್ಕೆ 4 ಕಿಮೀ ದೂರದಲ್ಲಿ ನಡೆದಿದೆ” ಎಂದು ಪಾಕಿಸ್ತಾನ್ ಫಸ್ಟ್ (@Pak1stTeam) ಹೆಸರಿನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಹಾಕಲಾಗಿದೆ. ಜೊತೆಗೆ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿಯುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ. ಪೋಸ್ಟ್‌ನಲ್ಲಿರುವ ವಿಡಿಯೋ ಇತ್ತೀಚೆಗೆ ಎಂ.ಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಬೆಂಕಿಗಾಹುತಿಯಾದ ಘಟನೆಯದ್ದಾಗಿದೆ.

ಜುಲೈ 9, 2024ರಂದು ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ ಬಳಿ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಎಚ್ಚೆತ್ತ ನಿರ್ವಾಹಕ ಬಸ್‌ನಲ್ಲಿದ್ದ ಜನರನ್ನು ಕೆಳಗಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಎಂ.ಜಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಬಸ್‌ ಹೊತ್ತಿ ಉರಿಯುವಾಗ ಭಾರೀ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು.

ಎಕ್ಸ್‌ ಪೋಸ್ಟ್‌ನಲ್ಲಿ ಡಿಆರ್‌ಡಿಒ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ 4 ಕಿಮೀ ಪಶ್ಚಿಮಕ್ಕೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅಸಲಿಗೆ ಹೆಚ್‌ಎಲ್‌ ವಿಮಾನ ಪರೀಕ್ಷಾ ಕೇಂದ್ರದಿಂದ ಎಂ.ಜಿ ರಸ್ತೆಯ ಅನಿಲ್‌ ಕುಂಬ್ಳೆ ಸರ್ಕಲ್‌ ಸುಮಾರು 9 ಕಿಮೀ ದೂರದಲ್ಲಿದೆ.

ಇದನ್ನೂ ಓದಿ : FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...