Homeಫ್ಯಾಕ್ಟ್‌ಚೆಕ್FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

- Advertisement -
- Advertisement -

ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ 1.5% ರಷ್ಟಿದ್ದ ಮುಸ್ಲಿಮರ ಜನಸಂಖ್ಯೆ 2024ರ ಹೊತ್ತಿಗೆ 16 % ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ‘ಎಚ್ಚರಿಕೆಯ ಕರೆಗಂಟೆ’ ಎಂದು ಮುಸ್ಲಿಮರನ್ನು ಗುರಿಯಾಗಿಸಿ ವಿಡಿಯೋವನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ, ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಭಾರತದಲ್ಲಿ ಬಲಪಂಥೀಯವಾದ ಮುನ್ನಲೆಗೆ ಬಂದಾಗಲೆಲ್ಲ ಮುಸ್ಲಿಮರ ಜನಸಂಖ್ಯೆ ಬಗ್ಗೆಯೇ ಹೆಚ್ಚಾಗಿ ಚರ್ಚೆಗಳು ಆರಂಭವಾಗುತ್ತದೆ. ಅದರಲ್ಲೂ ಇತ್ತೀಚೆಗಂತೂ ಮುಸ್ಲಿ ಜನಸಂಖ್ಯೆ ಹೆಚ್ಚಳದಿಂದ ಭಾರತ ನಾಶವಾಗಲಿದೆ ಎಂದೆಲ್ಲ ಅಪಪ್ರಚಾರ ಮಾಡಲಾಗುತ್ತಿದೆ. ಹಾಗಾಗಿ, 24 ವರ್ಷಗಳಲ್ಲಿ ಉತ್ತರಾಖಂಡದಲ್ಲಿರುವ ಮುಸ್ಲಿಮರ ಸಂಖ್ಯೆ ಶೇಕಡಾ.1 ರಿಂದ ಶೇಕಡಾ 16ರಷ್ಟು ಏರಿಕೆಯಾಗಿದೆ ಎಂದು ಹಂಚಿಕೊಳ್ಳುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು.

“2001-11ರ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇಕಡಾ 24 ರಷ್ಟು ಏರಿಕೆ” ಎಂಬ ಶೀರ್ಷಿಕೆಯಲ್ಲಿ  2015ರ ಜನವರಿ 22ರಂದು ದಿ ಇಕನಾಮಿಕ್ ಟೈಮ್ಸ್ ವರದಿ ಮಾಡಿದ್ದು, ಯಾವ ಯಾವ ರಾಜ್ಯಗಳಲ್ಲಿ ಮುಸ್ಲಿಮರ ಜನಸಂಖ್ಯೆ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಬಗ್ಗೆ ಜನಗಣತಿಯ ವರದಿಯನ್ನು ಆಧಾರವಾಗಿಸಿ ವಿಶ್ಲೇಷಣೆ ಮಾಡಿದೆ.

ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ ಎಂದು ಸತ್ಯಶೋಧನಾ ಸಂಸ್ಥೆ ದಿ ಇಟೆಂಟ್ ಡಾಟಾ ವರದಿ ಮಾಡಿದೆ. ವಾಸ್ತವವಾಗಿ, ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಲ್ಲಿ 11.9% ರಷ್ಟಿತ್ತು ಮತ್ತು 2011 ರ ವೇಳೆಗೆ 13.9% ಕ್ಕೆ ಏರಿತು, ಇದು ಆ ದಶಕದಲ್ಲಿ 2 ಶೇಕಡಾವಾರು ಅಂಶಗಳ ಏರಿಕೆಯನ್ನು ಸೂಚಿಸುತ್ತದೆ. 2011 ರ ಜನಗಣತಿಯನ್ನು ಮೀರಿ ಉತ್ತರಾಖಂಡದ ಧಾರ್ಮಿಕ ಜನಸಂಖ್ಯೆಯ ಬಗ್ಗೆ ಯಾವುದೇ ನವೀಕರಿಸಿದ ಅಧಿಕೃತ ಡೇಟಾ ಇಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಲಭ್ಯವಾದ ವರದಿಳ ಪ್ರಕಾರ ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಿಂದ 2011ರ 10ವರ್ಷದ ಅವಧಿಯಲ್ಲಿ ಶೇಕಡ 2% ಮಾತ್ರ ಏರಿಕೆಯಾಗಿದೆ. ಮುಂದುವರೆದು 2011 ರ ನಂತರ ಜನಗಣತಿಯನ್ನು ಅಂದರೆ 2024ರ ಜನಗಣತಿ ಇನ್ನೂ ಆಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...