Homeಫ್ಯಾಕ್ಟ್‌ಚೆಕ್FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

- Advertisement -
- Advertisement -

ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ 1.5% ರಷ್ಟಿದ್ದ ಮುಸ್ಲಿಮರ ಜನಸಂಖ್ಯೆ 2024ರ ಹೊತ್ತಿಗೆ 16 % ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ‘ಎಚ್ಚರಿಕೆಯ ಕರೆಗಂಟೆ’ ಎಂದು ಮುಸ್ಲಿಮರನ್ನು ಗುರಿಯಾಗಿಸಿ ವಿಡಿಯೋವನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ, ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಭಾರತದಲ್ಲಿ ಬಲಪಂಥೀಯವಾದ ಮುನ್ನಲೆಗೆ ಬಂದಾಗಲೆಲ್ಲ ಮುಸ್ಲಿಮರ ಜನಸಂಖ್ಯೆ ಬಗ್ಗೆಯೇ ಹೆಚ್ಚಾಗಿ ಚರ್ಚೆಗಳು ಆರಂಭವಾಗುತ್ತದೆ. ಅದರಲ್ಲೂ ಇತ್ತೀಚೆಗಂತೂ ಮುಸ್ಲಿ ಜನಸಂಖ್ಯೆ ಹೆಚ್ಚಳದಿಂದ ಭಾರತ ನಾಶವಾಗಲಿದೆ ಎಂದೆಲ್ಲ ಅಪಪ್ರಚಾರ ಮಾಡಲಾಗುತ್ತಿದೆ. ಹಾಗಾಗಿ, 24 ವರ್ಷಗಳಲ್ಲಿ ಉತ್ತರಾಖಂಡದಲ್ಲಿರುವ ಮುಸ್ಲಿಮರ ಸಂಖ್ಯೆ ಶೇಕಡಾ.1 ರಿಂದ ಶೇಕಡಾ 16ರಷ್ಟು ಏರಿಕೆಯಾಗಿದೆ ಎಂದು ಹಂಚಿಕೊಳ್ಳುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು.

“2001-11ರ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇಕಡಾ 24 ರಷ್ಟು ಏರಿಕೆ” ಎಂಬ ಶೀರ್ಷಿಕೆಯಲ್ಲಿ  2015ರ ಜನವರಿ 22ರಂದು ದಿ ಇಕನಾಮಿಕ್ ಟೈಮ್ಸ್ ವರದಿ ಮಾಡಿದ್ದು, ಯಾವ ಯಾವ ರಾಜ್ಯಗಳಲ್ಲಿ ಮುಸ್ಲಿಮರ ಜನಸಂಖ್ಯೆ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಬಗ್ಗೆ ಜನಗಣತಿಯ ವರದಿಯನ್ನು ಆಧಾರವಾಗಿಸಿ ವಿಶ್ಲೇಷಣೆ ಮಾಡಿದೆ.

ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ ಎಂದು ಸತ್ಯಶೋಧನಾ ಸಂಸ್ಥೆ ದಿ ಇಟೆಂಟ್ ಡಾಟಾ ವರದಿ ಮಾಡಿದೆ. ವಾಸ್ತವವಾಗಿ, ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಲ್ಲಿ 11.9% ರಷ್ಟಿತ್ತು ಮತ್ತು 2011 ರ ವೇಳೆಗೆ 13.9% ಕ್ಕೆ ಏರಿತು, ಇದು ಆ ದಶಕದಲ್ಲಿ 2 ಶೇಕಡಾವಾರು ಅಂಶಗಳ ಏರಿಕೆಯನ್ನು ಸೂಚಿಸುತ್ತದೆ. 2011 ರ ಜನಗಣತಿಯನ್ನು ಮೀರಿ ಉತ್ತರಾಖಂಡದ ಧಾರ್ಮಿಕ ಜನಸಂಖ್ಯೆಯ ಬಗ್ಗೆ ಯಾವುದೇ ನವೀಕರಿಸಿದ ಅಧಿಕೃತ ಡೇಟಾ ಇಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಲಭ್ಯವಾದ ವರದಿಳ ಪ್ರಕಾರ ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಿಂದ 2011ರ 10ವರ್ಷದ ಅವಧಿಯಲ್ಲಿ ಶೇಕಡ 2% ಮಾತ್ರ ಏರಿಕೆಯಾಗಿದೆ. ಮುಂದುವರೆದು 2011 ರ ನಂತರ ಜನಗಣತಿಯನ್ನು ಅಂದರೆ 2024ರ ಜನಗಣತಿ ಇನ್ನೂ ಆಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...