Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...