Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...