Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...