Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....