Homeದಿಟನಾಗರಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...