Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...