Homeನಿಜವೋ ಸುಳ್ಳೋFact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

- Advertisement -
- Advertisement -

ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ” ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು? ಇಂತಹ ಮನಸ್ಥಿತಿ ಭಾರತದಲ್ಲಿ ಮಾತ್ರವಲ್ಲ, ವಿಶ್ವಾದ್ಯಂತ ಹರಡಿದೆ. ಬ್ರಿಟನ್‌ನ ಇಬ್ಬರು ಯುವಕರಾದ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಮುಸ್ಲಿಮೇತರ ಗ್ರಾಹಕರಿಗೆ ಮಾನವನ ದೈಹಿಕ ತ್ಯಾಜ್ಯವನ್ನು ನೀಡುತ್ತಿದ್ದಾರೆ.” ಎಂದು ಬರೆಯಲಾಗಿತ್ತು. ಈ ಲೇಖನವು ಫೇಸ್‌ಬುಕ್‌ನಲ್ಲಿ 12,000 ಷೇರುಗಳನ್ನು ಮತ್ತು 14,000 ಲೈಕ್‌ಗಳನ್ನು ಪಡೆದಿದೆ. ಅದರಲ್ಲಿ “ಅವರು ಮುಸ್ಲಿಮೇತರರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದರು, ಈಗ ಸತ್ಯ ಹೊರಬಂದಿದೆ” ಎಂಬ ಶಿರ್ಷಿಕೆ ನೀಡಲಾಗಿದೆ.

ಇದಲ್ಲದೆ ಲೇಖನದಲ್ಲಿ “ಮೊಹಮ್ಮದ್ ಅಬ್ದುಲ್ ಬಸಿತ್ ಮತ್ತು ಅಮ್ಜದ್ ಭಟ್ಟಿ ಬ್ರಿಟನ್‌ನಲ್ಲಿ ರೆಸ್ಟೋರೆಂಟ್ ಮಾಲೀಕರಾಗಿದ್ದು, ವರದಿಗಳ ಪ್ರಕಾರ, ಅವರು ಆಹಾರದಲ್ಲಿ ಮಾನವ ಮಲವನ್ನು ಬೆರೆಸಿ ಮುಸ್ಲಿಮೇತರ ಗ್ರಾಹಕರಿಗೆ ನೀಡುತ್ತಿದ್ದರು. ನಾಟಿಂಗ್‌ಹ್ಯಾಮ್‌ನಲ್ಲಿ ಇವರಿಬ್ಬರು ತಮ್ಮ ರೆಸ್ಟೋರೆಂಟನ್ನು ಬಹಳ ಸಮಯದಿಂದ ನಡೆಸುತ್ತಿದ್ದರು. ” ಎಂದು ಮುಂದುವರೆಯುತ್ತದೆ.

ಝೀ ನ್ಯೂಸ್‌ನ ಈ ಲೇಖನ ಇನ್ನೂ ಲೇಖನ msn.com ನಲ್ಲಿ ಲಭ್ಯವಿದೆ. ಅದರ ಆರ್ಕೈವ್ ಲಿಂಕ್ ಅನ್ನು ಇಲ್ಲಿ ವೀಕ್ಷಿಸಬಹುದು. ಲೇಖನದ ಆಯ್ದ ಭಾಗದ ಸ್ಕ್ರೀನ್‌ಶಾಟ್ ಕೆಳಗೆ ಪೋಸ್ಟ್ ಮಾಡಲಾಗಿದೆ. ಝೀ ನ್ಯೂಸ್ ಈ ರೆಸ್ಟೋರೆಂಟ್ ಎರಡು ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತಿತ್ತು ಹಾಗೂ  ಮುಸ್ಲಿಮೇತರರಿಗೆ ಮಾನವ ಮಲದ ಜೊತೆಗೆ ಆಹಾರವನ್ನು ನೀಡಲಾಗುತ್ತಿತ್ತು ಎಂದು ಹೇಳಿದೆ.

ಝೀ ನ್ಯೂಸ್ ಈಗ ತನ್ನ ವರದಿಯನ್ನು ನವೀಕರಿಸಿ ಇಂತಹ ಆಹಾರ ಮಾಲಿನ್ಯದ ಪ್ರಕರಣಗಳು ಭಾರತದಲ್ಲಿ ಮಾತ್ರವಲ್ಲದೆ ಇಂಗ್ಲೆಂಡ್‌ನಲ್ಲೂ ವರದಿಯಾಗಿದೆ ಎಂದು ಬರೆದಿದೆ. ಆದರೆ ಲೇಖನದ URL ಇನ್ನೂ “ತಬ್ಲೀಘಿ ಜಮಾತ್ ಮನಸ್ಥಿತಿ” ಎಂದೇ ಇದೆ.

ಝೀ ನ್ಯೂಸ್‌ನ ಈ ವರದಿ ಮೂಲ – ವೈರಲ್ ಆಗಿದ್ದ ಸಂದೇಶ

ಝೀ ನ್ಯೂಸ್‌ನ ಈ ವರದಿ ಏಪ್ರಿಲ್ 21 ರಿಂದ ವೈರಲ್ ಆಗಿರುವ ಸಂದೇಶವೊಂದನ್ನು ಆಧರಿಸಿದೆ. ಈ ಸಂದೇಶವು ಯುಕೆ ಮೂಲದ ಡೈಲಿ ಮೇಲ್‌ನ ಲಿಂಕ್ ಅನ್ನು ಹೊಂದಿದೆ ಇದು ಝೀ ನ್ಯೂಸ್ ವರದಿಯ ಭಾಗವಲ್ಲ. ವರದಿಯೂ ಪಡೆದ ಮೂಲ ಅಥವಾ ಘಟನೆ ಸಂಭವಿಸಿದ ದಿನಾಂಕವನ್ನು ಉಲ್ಲೇಖಿಸದಿರಬಹುದು. ಆದರೆ ಡೈಲಿ ಮೇಲ್ ವರದಿ ಸೆಪ್ಟೆಂಬರ್ 2015 ದ್ದಾಗಿದೆ.

ಫ್ಯಾಕ್ಟ್-ಚೆಕ್

ಈ ವರದಿಯ ಎರಡು ಪ್ರತಿಪಾದನೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿದೆ,

1. ವ್ಯಕ್ತಿಯ ಧರ್ಮದ ಆಧಾರದ ಮೇಲೆ ಆಹಾರವು ಕಲುಷಿತಗೊಳಿಸಲಾಗಿದೆಯೇ?

2. ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆಯೇ?

ರೆಸ್ಟೋರೆಂಟ್ ಮಾಲೀಕರು ಮುಸ್ಲಿಮೇತರ ಗ್ರಾಹಕರಿಗೆ ಆರೋಗ್ಯಕರವಲ್ಲದ ಆಹಾರವನ್ನು ನೀಡುತ್ತಿದ್ದರು ಎಂದು ಡೈಲಿ ಮೇಲ್ ವರದಿಯಲ್ಲಿ ಹೇಳಲಾಗಿಲ್ಲ. ಬಿಬಿಸಿ ಮತ್ತು ದಿ ಗಾರ್ಡಿಯನ್ ಸಹ 2015 ರಲ್ಲಿ ಈ ಘಟನೆಯನ್ನು ವರದಿ ಮಾಡಿವೆ. ಈ ವರದಿಗಳು ಯಾವುದೆ ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ. ಆದ್ದರಿಂದ, ಮೊದಲ ಪ್ರತಿಪಾದನೆ ಸುಳ್ಳಾಗಿದೆ.

ಇನ್ನು ಎರಡನೇ ಪ್ರತಿಪಾದನೆಯ ಬಗ್ಗೆ ಹೇಳುವುದಾದರೆ. ಡೈಲಿ ಮೇಲ್‌ನಲ್ಲಿನ ವರದಿಯ ಪ್ರಕಾರ, ಆಹಾರವು ನಿಜವಾಗಿಯೂ ಮಾನವ ಮಲದಿಂದ ಕಲುಷಿತಗೊಂಡಿತ್ತು, ಆದರೆ ಇದು ಉದ್ದೇಶಪೂರ್ವಕವಾಗಿರಲಿಲ್ಲ, ಸಿಬ್ಬಂದಿ ಕೈ ತೊಳೆಯುವಾಗ ಅಸಮರ್ಪಕವಾಗಿ ಇದ್ದುದರಿಂದಾಗಿತ್ತು. “ನಾಟಿಂಗ್‌ಹ್ಯಾಮ್‌ನ ಖೈಬರ್ ಪಾಸ್ ಟೇಕ್ಅವೇನ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಅವರಿಂದಾಗಿ 142 ಗ್ರಾಹಕರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ” ಎಂದು ವರದಿ ಹೇಳುತ್ತದೆ. ಇವರಿಬ್ಬರಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು £ 25 ಸಾವಿರ ಪೌಂಡ್ ದಂಡ ನೀಡುವಂತೆ ನ್ಯಾಯಮೂರ್ತಿ ಜೆರೆಮಿ ಲೀ ಆದೇಶಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳಪೆ ಸೋಪ್ ಮತ್ತು ಶುದ್ಧ ನೀರಿನಿಂದ ಕೈ ತೊಳೆಯದಿರುವುದು ಇಲ್ಲಿ ಮುಖ್ಯವಾಗಿ ಆಗಿರುವ ತಪ್ಪಾಗಿದೆ.

ದಿ ಗಾರ್ಡಿಯನ್ ಪ್ರಕಟಿಸಿದ ವರದಿಯಲ್ಲಿ, “ಟೇಕ್ಅವೇ ಸಿಬ್ಬಂದಿಗಳು ಶೌಚಾಲಯ ಬಳಸಿ ಸರಿಯಾಗಿ ಕೈತೊಳೆಯುದರಿಂದ 100 ಕ್ಕೂ ಹೆಚ್ಚು ಗ್ರಾಹಕರು ಎರಡು ತಿಂಗಳವರೆಗೆ ಕಾಯಿಲೆಯಿಂದ ಬಳಲುತ್ತಿದ್ದರು” ಎಂದು ವರದಿ ಮಾಡಿತ್ತು.

ನಾಟಿಂಗ್‌ಹ್ಯಾಮ್‌ ಸಿಟಿ ಕೌನ್ಸಿಲ್‌ನ ಆಹಾರ, ಆರೋಗ್ಯ ಮತ್ತು ಸುರಕ್ಷತಾ ತಂಡದ ಪಾಲ್ ಡೇಲ್ಸ್ ಅವರ ಹೇಳಿಕೆಯನ್ನು ಬಿಬಿಸಿ  ವರದಿಯು ಹೊಂದಿದೆ – “ಕೆಲವು ಕಾರ್ಮಿಕರ ಕೈ ತೊಳೆಯುವ ಪದ್ಧತಿಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ. ಇದರಿಂದಾಗಿ ಆಹಾರವು ಕಲುಷಿತಗೊಳ್ಳಲು ಕಾರಣವಾಯಿತು. ರೆಸ್ಟೋರೆಂಟ್ ಮಾಲೀಕರನ್ನು 12 ತಿಂಗಳು ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.”

ಆದ್ದರಿಂದ, ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆ ಎಂಬ ಹೇಳಿಕೆಯೂ ಸುಳ್ಳು ಎಂದು ಸಾಬೀತು ಮಾಡಬಹುದು.

‘ದಿ ಖೈಬರ್ ಪಾಸ್’ ರೆಸ್ಟೋರೆಂಟ್ ಈಗ ಸಕ್ರಿಯವಗಿದ್ದು, ಆದರೆ ಇದು tripadvisor.com ನಲ್ಲಿ ಉತ್ತಮ ವಿಮರ್ಶೆಗಳನ್ನು ಹೊಂದಿಲ್ಲ. ಹಲವಾರು ಜನರು ಆರೋಗ್ಯಕರವಲ್ಲದ ಮಾನದಂಡಗಳ ಬಗ್ಗೆ ದೂರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಝೀ ನ್ಯೂಸ್ 2015 ರ ಘಟನೆ ವರದಿಯನ್ನು ಧಾರ್ಮಿಕ ದೃಷ್ಟಿಕೋನ ನೀಡಿ ಸುಳ್ಳುಗಳನ್ನು ಬೆರೆಸಿ ವರದಿ ಮಾಡಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...