Homeನಿಜವೋ ಸುಳ್ಳೋFact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

- Advertisement -
- Advertisement -

ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ” ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು? ಇಂತಹ ಮನಸ್ಥಿತಿ ಭಾರತದಲ್ಲಿ ಮಾತ್ರವಲ್ಲ, ವಿಶ್ವಾದ್ಯಂತ ಹರಡಿದೆ. ಬ್ರಿಟನ್‌ನ ಇಬ್ಬರು ಯುವಕರಾದ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಮುಸ್ಲಿಮೇತರ ಗ್ರಾಹಕರಿಗೆ ಮಾನವನ ದೈಹಿಕ ತ್ಯಾಜ್ಯವನ್ನು ನೀಡುತ್ತಿದ್ದಾರೆ.” ಎಂದು ಬರೆಯಲಾಗಿತ್ತು. ಈ ಲೇಖನವು ಫೇಸ್‌ಬುಕ್‌ನಲ್ಲಿ 12,000 ಷೇರುಗಳನ್ನು ಮತ್ತು 14,000 ಲೈಕ್‌ಗಳನ್ನು ಪಡೆದಿದೆ. ಅದರಲ್ಲಿ “ಅವರು ಮುಸ್ಲಿಮೇತರರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದರು, ಈಗ ಸತ್ಯ ಹೊರಬಂದಿದೆ” ಎಂಬ ಶಿರ್ಷಿಕೆ ನೀಡಲಾಗಿದೆ.

ಇದಲ್ಲದೆ ಲೇಖನದಲ್ಲಿ “ಮೊಹಮ್ಮದ್ ಅಬ್ದುಲ್ ಬಸಿತ್ ಮತ್ತು ಅಮ್ಜದ್ ಭಟ್ಟಿ ಬ್ರಿಟನ್‌ನಲ್ಲಿ ರೆಸ್ಟೋರೆಂಟ್ ಮಾಲೀಕರಾಗಿದ್ದು, ವರದಿಗಳ ಪ್ರಕಾರ, ಅವರು ಆಹಾರದಲ್ಲಿ ಮಾನವ ಮಲವನ್ನು ಬೆರೆಸಿ ಮುಸ್ಲಿಮೇತರ ಗ್ರಾಹಕರಿಗೆ ನೀಡುತ್ತಿದ್ದರು. ನಾಟಿಂಗ್‌ಹ್ಯಾಮ್‌ನಲ್ಲಿ ಇವರಿಬ್ಬರು ತಮ್ಮ ರೆಸ್ಟೋರೆಂಟನ್ನು ಬಹಳ ಸಮಯದಿಂದ ನಡೆಸುತ್ತಿದ್ದರು. ” ಎಂದು ಮುಂದುವರೆಯುತ್ತದೆ.

ಝೀ ನ್ಯೂಸ್‌ನ ಈ ಲೇಖನ ಇನ್ನೂ ಲೇಖನ msn.com ನಲ್ಲಿ ಲಭ್ಯವಿದೆ. ಅದರ ಆರ್ಕೈವ್ ಲಿಂಕ್ ಅನ್ನು ಇಲ್ಲಿ ವೀಕ್ಷಿಸಬಹುದು. ಲೇಖನದ ಆಯ್ದ ಭಾಗದ ಸ್ಕ್ರೀನ್‌ಶಾಟ್ ಕೆಳಗೆ ಪೋಸ್ಟ್ ಮಾಡಲಾಗಿದೆ. ಝೀ ನ್ಯೂಸ್ ಈ ರೆಸ್ಟೋರೆಂಟ್ ಎರಡು ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತಿತ್ತು ಹಾಗೂ  ಮುಸ್ಲಿಮೇತರರಿಗೆ ಮಾನವ ಮಲದ ಜೊತೆಗೆ ಆಹಾರವನ್ನು ನೀಡಲಾಗುತ್ತಿತ್ತು ಎಂದು ಹೇಳಿದೆ.

ಝೀ ನ್ಯೂಸ್ ಈಗ ತನ್ನ ವರದಿಯನ್ನು ನವೀಕರಿಸಿ ಇಂತಹ ಆಹಾರ ಮಾಲಿನ್ಯದ ಪ್ರಕರಣಗಳು ಭಾರತದಲ್ಲಿ ಮಾತ್ರವಲ್ಲದೆ ಇಂಗ್ಲೆಂಡ್‌ನಲ್ಲೂ ವರದಿಯಾಗಿದೆ ಎಂದು ಬರೆದಿದೆ. ಆದರೆ ಲೇಖನದ URL ಇನ್ನೂ “ತಬ್ಲೀಘಿ ಜಮಾತ್ ಮನಸ್ಥಿತಿ” ಎಂದೇ ಇದೆ.

ಝೀ ನ್ಯೂಸ್‌ನ ಈ ವರದಿ ಮೂಲ – ವೈರಲ್ ಆಗಿದ್ದ ಸಂದೇಶ

ಝೀ ನ್ಯೂಸ್‌ನ ಈ ವರದಿ ಏಪ್ರಿಲ್ 21 ರಿಂದ ವೈರಲ್ ಆಗಿರುವ ಸಂದೇಶವೊಂದನ್ನು ಆಧರಿಸಿದೆ. ಈ ಸಂದೇಶವು ಯುಕೆ ಮೂಲದ ಡೈಲಿ ಮೇಲ್‌ನ ಲಿಂಕ್ ಅನ್ನು ಹೊಂದಿದೆ ಇದು ಝೀ ನ್ಯೂಸ್ ವರದಿಯ ಭಾಗವಲ್ಲ. ವರದಿಯೂ ಪಡೆದ ಮೂಲ ಅಥವಾ ಘಟನೆ ಸಂಭವಿಸಿದ ದಿನಾಂಕವನ್ನು ಉಲ್ಲೇಖಿಸದಿರಬಹುದು. ಆದರೆ ಡೈಲಿ ಮೇಲ್ ವರದಿ ಸೆಪ್ಟೆಂಬರ್ 2015 ದ್ದಾಗಿದೆ.

ಫ್ಯಾಕ್ಟ್-ಚೆಕ್

ಈ ವರದಿಯ ಎರಡು ಪ್ರತಿಪಾದನೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿದೆ,

1. ವ್ಯಕ್ತಿಯ ಧರ್ಮದ ಆಧಾರದ ಮೇಲೆ ಆಹಾರವು ಕಲುಷಿತಗೊಳಿಸಲಾಗಿದೆಯೇ?

2. ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆಯೇ?

ರೆಸ್ಟೋರೆಂಟ್ ಮಾಲೀಕರು ಮುಸ್ಲಿಮೇತರ ಗ್ರಾಹಕರಿಗೆ ಆರೋಗ್ಯಕರವಲ್ಲದ ಆಹಾರವನ್ನು ನೀಡುತ್ತಿದ್ದರು ಎಂದು ಡೈಲಿ ಮೇಲ್ ವರದಿಯಲ್ಲಿ ಹೇಳಲಾಗಿಲ್ಲ. ಬಿಬಿಸಿ ಮತ್ತು ದಿ ಗಾರ್ಡಿಯನ್ ಸಹ 2015 ರಲ್ಲಿ ಈ ಘಟನೆಯನ್ನು ವರದಿ ಮಾಡಿವೆ. ಈ ವರದಿಗಳು ಯಾವುದೆ ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ. ಆದ್ದರಿಂದ, ಮೊದಲ ಪ್ರತಿಪಾದನೆ ಸುಳ್ಳಾಗಿದೆ.

ಇನ್ನು ಎರಡನೇ ಪ್ರತಿಪಾದನೆಯ ಬಗ್ಗೆ ಹೇಳುವುದಾದರೆ. ಡೈಲಿ ಮೇಲ್‌ನಲ್ಲಿನ ವರದಿಯ ಪ್ರಕಾರ, ಆಹಾರವು ನಿಜವಾಗಿಯೂ ಮಾನವ ಮಲದಿಂದ ಕಲುಷಿತಗೊಂಡಿತ್ತು, ಆದರೆ ಇದು ಉದ್ದೇಶಪೂರ್ವಕವಾಗಿರಲಿಲ್ಲ, ಸಿಬ್ಬಂದಿ ಕೈ ತೊಳೆಯುವಾಗ ಅಸಮರ್ಪಕವಾಗಿ ಇದ್ದುದರಿಂದಾಗಿತ್ತು. “ನಾಟಿಂಗ್‌ಹ್ಯಾಮ್‌ನ ಖೈಬರ್ ಪಾಸ್ ಟೇಕ್ಅವೇನ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಅವರಿಂದಾಗಿ 142 ಗ್ರಾಹಕರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ” ಎಂದು ವರದಿ ಹೇಳುತ್ತದೆ. ಇವರಿಬ್ಬರಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು £ 25 ಸಾವಿರ ಪೌಂಡ್ ದಂಡ ನೀಡುವಂತೆ ನ್ಯಾಯಮೂರ್ತಿ ಜೆರೆಮಿ ಲೀ ಆದೇಶಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳಪೆ ಸೋಪ್ ಮತ್ತು ಶುದ್ಧ ನೀರಿನಿಂದ ಕೈ ತೊಳೆಯದಿರುವುದು ಇಲ್ಲಿ ಮುಖ್ಯವಾಗಿ ಆಗಿರುವ ತಪ್ಪಾಗಿದೆ.

ದಿ ಗಾರ್ಡಿಯನ್ ಪ್ರಕಟಿಸಿದ ವರದಿಯಲ್ಲಿ, “ಟೇಕ್ಅವೇ ಸಿಬ್ಬಂದಿಗಳು ಶೌಚಾಲಯ ಬಳಸಿ ಸರಿಯಾಗಿ ಕೈತೊಳೆಯುದರಿಂದ 100 ಕ್ಕೂ ಹೆಚ್ಚು ಗ್ರಾಹಕರು ಎರಡು ತಿಂಗಳವರೆಗೆ ಕಾಯಿಲೆಯಿಂದ ಬಳಲುತ್ತಿದ್ದರು” ಎಂದು ವರದಿ ಮಾಡಿತ್ತು.

ನಾಟಿಂಗ್‌ಹ್ಯಾಮ್‌ ಸಿಟಿ ಕೌನ್ಸಿಲ್‌ನ ಆಹಾರ, ಆರೋಗ್ಯ ಮತ್ತು ಸುರಕ್ಷತಾ ತಂಡದ ಪಾಲ್ ಡೇಲ್ಸ್ ಅವರ ಹೇಳಿಕೆಯನ್ನು ಬಿಬಿಸಿ  ವರದಿಯು ಹೊಂದಿದೆ – “ಕೆಲವು ಕಾರ್ಮಿಕರ ಕೈ ತೊಳೆಯುವ ಪದ್ಧತಿಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ. ಇದರಿಂದಾಗಿ ಆಹಾರವು ಕಲುಷಿತಗೊಳ್ಳಲು ಕಾರಣವಾಯಿತು. ರೆಸ್ಟೋರೆಂಟ್ ಮಾಲೀಕರನ್ನು 12 ತಿಂಗಳು ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.”

ಆದ್ದರಿಂದ, ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆ ಎಂಬ ಹೇಳಿಕೆಯೂ ಸುಳ್ಳು ಎಂದು ಸಾಬೀತು ಮಾಡಬಹುದು.

‘ದಿ ಖೈಬರ್ ಪಾಸ್’ ರೆಸ್ಟೋರೆಂಟ್ ಈಗ ಸಕ್ರಿಯವಗಿದ್ದು, ಆದರೆ ಇದು tripadvisor.com ನಲ್ಲಿ ಉತ್ತಮ ವಿಮರ್ಶೆಗಳನ್ನು ಹೊಂದಿಲ್ಲ. ಹಲವಾರು ಜನರು ಆರೋಗ್ಯಕರವಲ್ಲದ ಮಾನದಂಡಗಳ ಬಗ್ಗೆ ದೂರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಝೀ ನ್ಯೂಸ್ 2015 ರ ಘಟನೆ ವರದಿಯನ್ನು ಧಾರ್ಮಿಕ ದೃಷ್ಟಿಕೋನ ನೀಡಿ ಸುಳ್ಳುಗಳನ್ನು ಬೆರೆಸಿ ವರದಿ ಮಾಡಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...