Homeನಿಜವೋ ಸುಳ್ಳೋFact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

- Advertisement -
- Advertisement -

ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ” ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು? ಇಂತಹ ಮನಸ್ಥಿತಿ ಭಾರತದಲ್ಲಿ ಮಾತ್ರವಲ್ಲ, ವಿಶ್ವಾದ್ಯಂತ ಹರಡಿದೆ. ಬ್ರಿಟನ್‌ನ ಇಬ್ಬರು ಯುವಕರಾದ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಮುಸ್ಲಿಮೇತರ ಗ್ರಾಹಕರಿಗೆ ಮಾನವನ ದೈಹಿಕ ತ್ಯಾಜ್ಯವನ್ನು ನೀಡುತ್ತಿದ್ದಾರೆ.” ಎಂದು ಬರೆಯಲಾಗಿತ್ತು. ಈ ಲೇಖನವು ಫೇಸ್‌ಬುಕ್‌ನಲ್ಲಿ 12,000 ಷೇರುಗಳನ್ನು ಮತ್ತು 14,000 ಲೈಕ್‌ಗಳನ್ನು ಪಡೆದಿದೆ. ಅದರಲ್ಲಿ “ಅವರು ಮುಸ್ಲಿಮೇತರರೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದರು, ಈಗ ಸತ್ಯ ಹೊರಬಂದಿದೆ” ಎಂಬ ಶಿರ್ಷಿಕೆ ನೀಡಲಾಗಿದೆ.

ಇದಲ್ಲದೆ ಲೇಖನದಲ್ಲಿ “ಮೊಹಮ್ಮದ್ ಅಬ್ದುಲ್ ಬಸಿತ್ ಮತ್ತು ಅಮ್ಜದ್ ಭಟ್ಟಿ ಬ್ರಿಟನ್‌ನಲ್ಲಿ ರೆಸ್ಟೋರೆಂಟ್ ಮಾಲೀಕರಾಗಿದ್ದು, ವರದಿಗಳ ಪ್ರಕಾರ, ಅವರು ಆಹಾರದಲ್ಲಿ ಮಾನವ ಮಲವನ್ನು ಬೆರೆಸಿ ಮುಸ್ಲಿಮೇತರ ಗ್ರಾಹಕರಿಗೆ ನೀಡುತ್ತಿದ್ದರು. ನಾಟಿಂಗ್‌ಹ್ಯಾಮ್‌ನಲ್ಲಿ ಇವರಿಬ್ಬರು ತಮ್ಮ ರೆಸ್ಟೋರೆಂಟನ್ನು ಬಹಳ ಸಮಯದಿಂದ ನಡೆಸುತ್ತಿದ್ದರು. ” ಎಂದು ಮುಂದುವರೆಯುತ್ತದೆ.

ಝೀ ನ್ಯೂಸ್‌ನ ಈ ಲೇಖನ ಇನ್ನೂ ಲೇಖನ msn.com ನಲ್ಲಿ ಲಭ್ಯವಿದೆ. ಅದರ ಆರ್ಕೈವ್ ಲಿಂಕ್ ಅನ್ನು ಇಲ್ಲಿ ವೀಕ್ಷಿಸಬಹುದು. ಲೇಖನದ ಆಯ್ದ ಭಾಗದ ಸ್ಕ್ರೀನ್‌ಶಾಟ್ ಕೆಳಗೆ ಪೋಸ್ಟ್ ಮಾಡಲಾಗಿದೆ. ಝೀ ನ್ಯೂಸ್ ಈ ರೆಸ್ಟೋರೆಂಟ್ ಎರಡು ರೀತಿಯ ಭಕ್ಷ್ಯಗಳನ್ನು ತಯಾರಿಸುತ್ತಿತ್ತು ಹಾಗೂ  ಮುಸ್ಲಿಮೇತರರಿಗೆ ಮಾನವ ಮಲದ ಜೊತೆಗೆ ಆಹಾರವನ್ನು ನೀಡಲಾಗುತ್ತಿತ್ತು ಎಂದು ಹೇಳಿದೆ.

ಝೀ ನ್ಯೂಸ್ ಈಗ ತನ್ನ ವರದಿಯನ್ನು ನವೀಕರಿಸಿ ಇಂತಹ ಆಹಾರ ಮಾಲಿನ್ಯದ ಪ್ರಕರಣಗಳು ಭಾರತದಲ್ಲಿ ಮಾತ್ರವಲ್ಲದೆ ಇಂಗ್ಲೆಂಡ್‌ನಲ್ಲೂ ವರದಿಯಾಗಿದೆ ಎಂದು ಬರೆದಿದೆ. ಆದರೆ ಲೇಖನದ URL ಇನ್ನೂ “ತಬ್ಲೀಘಿ ಜಮಾತ್ ಮನಸ್ಥಿತಿ” ಎಂದೇ ಇದೆ.

ಝೀ ನ್ಯೂಸ್‌ನ ಈ ವರದಿ ಮೂಲ – ವೈರಲ್ ಆಗಿದ್ದ ಸಂದೇಶ

ಝೀ ನ್ಯೂಸ್‌ನ ಈ ವರದಿ ಏಪ್ರಿಲ್ 21 ರಿಂದ ವೈರಲ್ ಆಗಿರುವ ಸಂದೇಶವೊಂದನ್ನು ಆಧರಿಸಿದೆ. ಈ ಸಂದೇಶವು ಯುಕೆ ಮೂಲದ ಡೈಲಿ ಮೇಲ್‌ನ ಲಿಂಕ್ ಅನ್ನು ಹೊಂದಿದೆ ಇದು ಝೀ ನ್ಯೂಸ್ ವರದಿಯ ಭಾಗವಲ್ಲ. ವರದಿಯೂ ಪಡೆದ ಮೂಲ ಅಥವಾ ಘಟನೆ ಸಂಭವಿಸಿದ ದಿನಾಂಕವನ್ನು ಉಲ್ಲೇಖಿಸದಿರಬಹುದು. ಆದರೆ ಡೈಲಿ ಮೇಲ್ ವರದಿ ಸೆಪ್ಟೆಂಬರ್ 2015 ದ್ದಾಗಿದೆ.

ಫ್ಯಾಕ್ಟ್-ಚೆಕ್

ಈ ವರದಿಯ ಎರಡು ಪ್ರತಿಪಾದನೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಬೇಕಾಗಿದೆ,

1. ವ್ಯಕ್ತಿಯ ಧರ್ಮದ ಆಧಾರದ ಮೇಲೆ ಆಹಾರವು ಕಲುಷಿತಗೊಳಿಸಲಾಗಿದೆಯೇ?

2. ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆಯೇ?

ರೆಸ್ಟೋರೆಂಟ್ ಮಾಲೀಕರು ಮುಸ್ಲಿಮೇತರ ಗ್ರಾಹಕರಿಗೆ ಆರೋಗ್ಯಕರವಲ್ಲದ ಆಹಾರವನ್ನು ನೀಡುತ್ತಿದ್ದರು ಎಂದು ಡೈಲಿ ಮೇಲ್ ವರದಿಯಲ್ಲಿ ಹೇಳಲಾಗಿಲ್ಲ. ಬಿಬಿಸಿ ಮತ್ತು ದಿ ಗಾರ್ಡಿಯನ್ ಸಹ 2015 ರಲ್ಲಿ ಈ ಘಟನೆಯನ್ನು ವರದಿ ಮಾಡಿವೆ. ಈ ವರದಿಗಳು ಯಾವುದೆ ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ. ಆದ್ದರಿಂದ, ಮೊದಲ ಪ್ರತಿಪಾದನೆ ಸುಳ್ಳಾಗಿದೆ.

ಇನ್ನು ಎರಡನೇ ಪ್ರತಿಪಾದನೆಯ ಬಗ್ಗೆ ಹೇಳುವುದಾದರೆ. ಡೈಲಿ ಮೇಲ್‌ನಲ್ಲಿನ ವರದಿಯ ಪ್ರಕಾರ, ಆಹಾರವು ನಿಜವಾಗಿಯೂ ಮಾನವ ಮಲದಿಂದ ಕಲುಷಿತಗೊಂಡಿತ್ತು, ಆದರೆ ಇದು ಉದ್ದೇಶಪೂರ್ವಕವಾಗಿರಲಿಲ್ಲ, ಸಿಬ್ಬಂದಿ ಕೈ ತೊಳೆಯುವಾಗ ಅಸಮರ್ಪಕವಾಗಿ ಇದ್ದುದರಿಂದಾಗಿತ್ತು. “ನಾಟಿಂಗ್‌ಹ್ಯಾಮ್‌ನ ಖೈಬರ್ ಪಾಸ್ ಟೇಕ್ಅವೇನ ಮೊಹಮ್ಮದ್ ಅಬ್ದುಲ್ ಬಾಸಿತ್ ಮತ್ತು ಅಮ್ಜದ್ ಭಟ್ಟಿ ಅವರಿಂದಾಗಿ 142 ಗ್ರಾಹಕರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ” ಎಂದು ವರದಿ ಹೇಳುತ್ತದೆ. ಇವರಿಬ್ಬರಿಗೆ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು £ 25 ಸಾವಿರ ಪೌಂಡ್ ದಂಡ ನೀಡುವಂತೆ ನ್ಯಾಯಮೂರ್ತಿ ಜೆರೆಮಿ ಲೀ ಆದೇಶಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಳಪೆ ಸೋಪ್ ಮತ್ತು ಶುದ್ಧ ನೀರಿನಿಂದ ಕೈ ತೊಳೆಯದಿರುವುದು ಇಲ್ಲಿ ಮುಖ್ಯವಾಗಿ ಆಗಿರುವ ತಪ್ಪಾಗಿದೆ.

ದಿ ಗಾರ್ಡಿಯನ್ ಪ್ರಕಟಿಸಿದ ವರದಿಯಲ್ಲಿ, “ಟೇಕ್ಅವೇ ಸಿಬ್ಬಂದಿಗಳು ಶೌಚಾಲಯ ಬಳಸಿ ಸರಿಯಾಗಿ ಕೈತೊಳೆಯುದರಿಂದ 100 ಕ್ಕೂ ಹೆಚ್ಚು ಗ್ರಾಹಕರು ಎರಡು ತಿಂಗಳವರೆಗೆ ಕಾಯಿಲೆಯಿಂದ ಬಳಲುತ್ತಿದ್ದರು” ಎಂದು ವರದಿ ಮಾಡಿತ್ತು.

ನಾಟಿಂಗ್‌ಹ್ಯಾಮ್‌ ಸಿಟಿ ಕೌನ್ಸಿಲ್‌ನ ಆಹಾರ, ಆರೋಗ್ಯ ಮತ್ತು ಸುರಕ್ಷತಾ ತಂಡದ ಪಾಲ್ ಡೇಲ್ಸ್ ಅವರ ಹೇಳಿಕೆಯನ್ನು ಬಿಬಿಸಿ  ವರದಿಯು ಹೊಂದಿದೆ – “ಕೆಲವು ಕಾರ್ಮಿಕರ ಕೈ ತೊಳೆಯುವ ಪದ್ಧತಿಗಳು ಸಂಪೂರ್ಣವಾಗಿ ಅಸಮರ್ಪಕವಾಗಿದೆ. ಇದರಿಂದಾಗಿ ಆಹಾರವು ಕಲುಷಿತಗೊಳ್ಳಲು ಕಾರಣವಾಯಿತು. ರೆಸ್ಟೋರೆಂಟ್ ಮಾಲೀಕರನ್ನು 12 ತಿಂಗಳು ಅಮಾನತುಗೊಳಿಸಲಾಗುವುದು ಎಂದು ನ್ಯಾಯಾಲಯ ಆದೇಶಿಸಿದೆ.”

ಆದ್ದರಿಂದ, ಮಾನವ ಮಲವನ್ನು ಉದ್ದೇಶಪೂರ್ವಕವಾಗಿ ಆಹಾರಕ್ಕೆ ಸೇರಿಸಲಾಗಿದೆ ಎಂಬ ಹೇಳಿಕೆಯೂ ಸುಳ್ಳು ಎಂದು ಸಾಬೀತು ಮಾಡಬಹುದು.

‘ದಿ ಖೈಬರ್ ಪಾಸ್’ ರೆಸ್ಟೋರೆಂಟ್ ಈಗ ಸಕ್ರಿಯವಗಿದ್ದು, ಆದರೆ ಇದು tripadvisor.com ನಲ್ಲಿ ಉತ್ತಮ ವಿಮರ್ಶೆಗಳನ್ನು ಹೊಂದಿಲ್ಲ. ಹಲವಾರು ಜನರು ಆರೋಗ್ಯಕರವಲ್ಲದ ಮಾನದಂಡಗಳ ಬಗ್ಗೆ ದೂರಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಝೀ ನ್ಯೂಸ್ 2015 ರ ಘಟನೆ ವರದಿಯನ್ನು ಧಾರ್ಮಿಕ ದೃಷ್ಟಿಕೋನ ನೀಡಿ ಸುಳ್ಳುಗಳನ್ನು ಬೆರೆಸಿ ವರದಿ ಮಾಡಿದೆ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...