Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...