Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುಣಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...