Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...