Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...