Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...