Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...