Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...