Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...