Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ...

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

- Advertisement -
- Advertisement -

ರೈಲು ಅಪಘಾತ ಉಂಟು ಮಾಡುವ ಉದ್ದೇಶದಿಂದ ಮುಸ್ಲಿಂ ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ 40 ಸೆಕೆಂಡ್ ಅವಧಿಯ ವಿಡಿಯೋವೊಂದು ವೈರಲ್ ಆಗಿದೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೆಲವರು “ರೈಲು ಜಿಹಾದ್” ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿದ್ದಾರೆ. ವೈರಲ್ ವಿಡಿಯೋದಲ್ಲಿ ಕುರ್ತಾ ಧರಿಸಿರುವ ಮೂವರು ಮಕ್ಕಳು ರೈಲು ಹಳಿಗಳಿಗೆ ಹಾನಿ ಮಾಡುತ್ತಿರುವ ದೃಶ್ಯವಿದೆ. ಅದರಲ್ಲಿ ಓರ್ವ ಹುಡುಗ ದೊಡ್ಡ ಸ್ಪ್ಯಾನರ್ ಹಿಡಿದು ರೈಲು ಹಳಿಯ ಬೋಲ್ಡ್‌ ತೆಗೆಯುತ್ತಿರುವುದು ಮತ್ತು ಇನ್ನೋರ್ವ ಹುಡುಗ ಅದನ್ನು ಚೀಲಕ್ಕೆ ತುಂಬಿಸುತ್ತಿರುವುನ್ನು ನೋಡಬಹುದು.

ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಸುದ್ದಿ ವಾಹಿನಿ ‘ಸುದರ್ಶನ್‌ ನ್ಯೂಸ್‌’ನ ಸಂಪಾದಕ ಸುರೇಶ್ ಚಾಂವಕೆ (@SureshChavhanke) ಆಗಸ್ಟ್ 30ರಂದು ವೈರಲ್ ವಿಡಿಯೋ ಹಂಚಿಕೊಂಡು “ಈ ವಯಸ್ಸಿನಲ್ಲಿ ಅವರು ರೈಲು ಹಳಿಗಳಿಗೆ ಹಾನಿ ಮಾಡುತ್ತಿದ್ದಾರೆ. ಊಹಿಸಿ, ಮುಂದಿನ 50 ವರ್ಷಗಳಲ್ಲಿ ಅವರು ಏನು ಮಾಡಬಹುದು? ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಏನು ಹೇಳಿದ್ದಾರೆ ಎಂಬುವುದನ್ನು ಸರ್ಕಾರ ಓದಿ ಅರ್ಥ ಮಾಡಿಕೊಳ್ಳಬೇಕು. ಕೇವಲ ಅವರ (ಬಾಬಾ ಸಾಹೇಬರ) ನಾಮವನ್ನು ಜಪಿಸುವುದರಿಂದ ಏನೂ ಆಗುವುದಿಲ್ಲ. ಅಶ್ವಿನಿ ವೈಷ್ಣವ್ (ರೈಲ್ವೆ ಸಚಿವ) ಅವರೇ ಇಂತವುಗಳು ಕಂಡಾಗ ತಕ್ಷಣ ಶೂಟ್ ಮಾಡಲು ಆರ್‌ಪಿಎಫ್‌ (ರೈಲ್ವೆ ರಕ್ಷಣಾ ದಳ)ಗೆ ಆದೇಶ ನೀಡಬೇಕು. ಆಗ ಭಯ ಹುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಇನ್ನೊಂದು ವೆರಿಫೈಡ್ ಎಕ್ಸ್‌ ಖಾತೆ ಎಕ್ಸ್ ಸೆಕ್ಯೂಲರ್ (@XSecular)ನಲ್ಲೂ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು ” ಈ ವಿಡಿಯೋ ಎಲ್ಲಿದ್ದು ಎಂದು ಗೊತ್ತಿಲ್ಲ. ಆದರೆ, ನೀವು ಈ ಹಂದಿ ಮರಿಗಳನ್ನು ಅವುಗಳ ಬಟ್ಟೆಯಿಂದ ಗುರುತಿಸಬಹುದು. ರೈಲ್ವೆ ಸಚಿವಾಲಯ ಮತ್ತು ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ಅವರೇ, ರೈಲ್ವೆ ಹಳಿಗಳ ಬಳಿ ಇರುವ ಕೊಳೆಗೇರಿಗಳಲ್ಲಿ ವಾಸಿಸುವ ಎಲ್ಲಾ ಮುಸ್ಲಿಮರನ್ನು ತೆರವುಗೊಳಿಸಿ. ಇಲ್ಲದಿದ್ದರೆ ಈ ಜಿಹಾದಿಗಳು ಒಂದು ದಿನ ದೊಡ್ಡ ಗಂಡಾಂತರವನ್ನು ಸೃಷ್ಟಿಸುತ್ತಾರೆ” ಎಂದು ಬರೆಯಲಾಗಿತ್ತು. ನಾವು ಈ ಸುದ್ದಿ ಬರೆಯುವ ವೇಳೆ ಈ ಪೋಸ್ಟ್ 6 ಲಕ್ಷದ 58 ಸಾವಿರ ವೀಕ್ಷಣೆ ಪಡೆದಿತ್ತು.

ಮತ್ತೊಂದು ವೆರಿಫೈಡ್ ಎಕ್ಸ್‌ ಖಾತೆ ಸ್ಕ್ವಿಂಟ್ ನಿಯಾನ್ (@TheSquind)ನಲ್ಲಿ ಆಗಸ್ಟ್ 29ರಂದು ವಿಡಿಯೋ ಹಂಚಿಕೊಂಡು “ಸುಳ್ಳು ಸುದ್ದಿ: ರೈಲು ಹಳಿಯಲ್ಲಿ ಸ್ಪ್ಯಾನರ್‌ಗಳೊಂದಿಗೆ ಆಟವಾಡುತ್ತಿರುವ ಮಕ್ಕಳು!” ಎಂದು ವ್ಯಂಗ್ಯವಾಗಿ ಬರೆದುಕೊಳ್ಳಲಾಗಿತ್ತು. ನಾವು ಈ ಸುದ್ದಿ ಬರೆಯುವ ಹೊತ್ತಿಗೆ ಈ ಪೋಸ್ಟ್ 1 ಲಕ್ಷದ 48 ಸಾವಿರ ವೀಕ್ಷಣೆ ಪಡೆದಿತ್ತು.

ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ವಿಡಿಯೋ ಹಂಚಿಕೊಂಡು ಮುಸ್ಲಿಂ ಮಕ್ಕಳು ರೈಲು ಹಳಿಯನ್ನು ಹಾಳುಗೆಡವುತ್ತಿದ್ದಾರೆ ಎಂದು ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್‌ಶಾಟ್ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಡಿಸೆಂಬರ್ 5, 2023ರಂದು ಪಾಕಿಸ್ತಾನಿ ಟ್ರೈನ್ಸ್‌ (Pakistani Trains) ಎಂಬ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ.

ವಿಡಿಯೋಗೆ ಉರ್ದು ಭಾಷೆಯಲ್ಲಿ ಕ್ಯಾಪ್ಶನ್ ಕೊಡಲಾಗಿತ್ತು. ನಾವು ಅದನ್ನು ಭಾ‍ಷಾಂತರಿಸಿ ನೋಡಿದಾಗ, “ಸರ್ತಾಜ್ ಖಾನ್ ಫಾಟಕ್, ಬೋಟ್ ಬೇಸಿನ್ ಚೌಕಿ ಬಳಿ ರೈಲ್ವೆ ಮಾರ್ಗದ ಬೆಲೆಬಾಳುವ ವಸ್ತುಗಳು ಸಾಕಷ್ಟು ಕಳ್ಳತನವಾಗುತ್ತಿವೆ. ಪಿ.ಎಸ್. ಬೋಟ್ ಬೇಸಿನ್ ಕ್ರಮ ಕೈಗೊಳ್ಳಲು ವಿನಂತಿಸಲಾಗಿದೆ” ಎಂದು ಬರೆದಿರುವುದು ತಿಳಿದು ಬಂದಿದೆ.

ಇದಲ್ಲದೆ, ಪ್ರೊಫೈಲ್‌ನ ಬಯೋ ನೋಡಿದಾಗ, ಅದನ್ನು ನಿರ್ವಹಿಸುತ್ತಿರುವವರು ಫಹಾದ್ ಆಸಿಫ್‌ ಎಂಬವರು ಗೊತ್ತಾಗಿದೆ. ಅವರ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಫೇಸ್‌ಬುಕ್ ಪೇಜ್‌ಗೆ ಲಿಂಕ್ ಮಾಡಲಾಗಿದೆ. ನಾವು ಯೂಟ್ಯೂಬ್ ಚಾನೆಲ್ ಪರಿಶೀಲಿಸಿದಾಗ, ಅದರಲ್ಲಿ ಪಾಕಿಸ್ತಾನಿ ರೈಲ್ವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಕಂಡು ಬಂದಿವೆ.

ನಾವು ವಿಡಿಯೋ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಡಿಸೆಂಬರ್ 5, 2023ರಂದು ‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಎಂಬ ಮತ್ತೊಂದು ಫೇಸ್‌ಬುಕ್‌ ಪೇಜ್‌ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋಗೆ ಉರ್ದು ಭಾಷೆಯಲ್ಲ ಕ್ಯಾಪ್ಶನ್ ಕೊಡಲಾಗಿದೆ. ಅದನ್ನು ನಾವು ಭಾಷಾಂತರಿಸಿ ನೋಡಿದಾಗ “ಬೋಟ್ ಬೇಸಿನ್ ಚೌಕಿ ಬಳಿ ಸರ್ತಾಜ್ ಖಾನ್ ಫಾಟಕ್ ರೈಲ್ವೆ ಮಾರ್ಗದಿಂದ ಟ್ರ್ಯಾಕ್ ನಟ್ ಬೋಲ್ಟ್ ಕಳ್ಳತನದ ವಿಡಿಯೋ ಪ್ರಕರಣ. ದಕ್ಷಿಣ ಡಿಐಜಿ ನೇತೃತ್ವದಲ್ಲಿ ಎಸ್‌ಹೆಚ್‌ಒ ಬೋಟ್‌ ಬೇಸಿನ್ ಕ್ರಮ ಕೈಗೊಂಡು ರೈಲ್ವೆ ಗೇಟ್‌ನಿಂದ ಮಾಲನ್ನು ಕಳವು ಮಾಡಿದ ಅಪ್ರಾಪ್ತರನ್ನು ಠಾಣೆಗೆ ಕರೆತಂದಿದೆ. ಆದರೆ, ಮಕ್ಕಳು ಚಿಕ್ಕವರಾಗಿದ್ದರಿಂದ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿತ್ತು. ಮಕ್ಕಳ ಕಳ್ಳತನ ಕೃತ್ಯದ ಬಗ್ಗೆ ಎಚ್ಚರಿಕೆ ನೀಡಿ, ತಮ್ಮ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗಿದೆ. ಪೋಷಕರು ಭರವಸೆ ನೀಡಿದ ಬಳಿಕ ಮಕ್ಕಳನ್ನು ಅವರಿಗೆ ಒಪ್ಪಿಸಲಾಗಿದೆ” ಎಂದು ಬರೆದುಕೊಂಡಿರುವುದು ಗೊತ್ತಾಗಿದೆ.

‘ಮೀಡಿಯಾ ಸೆಲ್ – ಡಿಐಜಿ ದಕ್ಷಿಣ ವಲಯ’ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕಳ್ಳತನ ಆರೋಪ ಹೊತ್ತಿರುವ ಮಕ್ಕಳು ‘ಶಿರೀನ್ ಜಿನ್ನಾ’ದಲ್ಲಿ ರೈಲು ಹಳಿಯ ನೆಟ್, ಬೋಲ್ಡ್ ಕಳವು ಮಾಡಿರುವುದಾಗಿ ಹೇಳುವುದಿದೆ. ಈ ಶಿರೀನ್ ಜಿನ್ನಾ ಬಗ್ಗೆ ಮಾಹಿತಿ ಹುಡುಕಿದಾಗ, ಅದು ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ಒಂದು ಕಾಲೊನಿ ಎಂದು ಗೊತ್ತಾಗಿದೆ.

ಒಟ್ಟಿನಲ್ಲಿ ಪಾಕಿಸ್ತಾನದ ಕರಾಚಿಯ ಬೋಟ್‌ ಬೇಸಿನ್ ಪ್ರದೇಶದ ‘ಶಿರೀನ್ ಜಿನ್ನಾ’ ಕಾಲೋನಿಯ ಬಳಿ ಮಕ್ಕಳು ರೈಲು ಹಳಿಯ ನೆಟ್‌, ಬೋಲ್ಟ್ ಕಳವು ಮಾಡಿರುವ ವಿಡಿಯೋವನ್ನು ಭಾರತದಲ್ಲಿ ಮುಸ್ಲಿಂ ಮಕ್ಕಳು ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಇಂಡೋನೇಷ್ಯಾದಲ್ಲಿ RSS ಇಲ್ಲದ ಕಾರಣ ಅಲ್ಲಿ ಕೋಮುಗಲಭೆ ಇಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...