Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...