Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...