Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...