Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...