Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...