Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...