Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...