Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...